6:37 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಹುಲ್ಲೂರು ತಾಂಡಾ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

15/12/2021, 18:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹುಲ್ಲೂರು ತಾಂಡದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ರಾಷ್ಟ್ರೀಯ ಗೋರ್ ಬಂಜಾರ್ ಕ್ರಾಂತಿ ಸಮಿತಿ ವಿಜಯನಗರ ಜಿಲ್ಲಾ ಘಟಕ ಆಗ್ರಹಿಸಿದೆ. 

ಪ್ರಕರಣ ವಿಜಯಪುರದ ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ, ಆದರೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದಂತೆ ಸೂಕ್ತ ಕ್ರಮಕ್ಕಾಗಿ ಮುಖ್ಯಮಂತ್ರಿಗಳಿಗೆ ಅವರು ಹಕ್ಕೊತ್ತಾಯ ಮಾಡಿದ್ದಾರೆ. ಹಕ್ಕೋತ್ತಾಯ ಪತ್ರವನ್ನು ಪದಾಧಿಕಾರಿಗಳು ಕೂಡ್ಲಿಗಿ ತಹಶಿಲ್ದಾರರಾದ ಟಿ.ಜಗಧೀಶರವರಿಗೆ ನೀಡಿದ್ದಾರೆ.

ಸಮಿತಿ ಮುಖಂಡರು ಮಾತನಾಡಿ,ಈ ಕೃತ್ಯದಲ್ಲಿ ಭಾಗಿಯಾದರೆನ್ನಲಾದ ಸಂಜು ಹುಲ್ಲೂರ ಮತ್ತು ಇತರರನ್ನು, ಈ ಕೂಡಲೆ ಬಂಧಿಸಿ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ಕೂಡಲೆ ಗಲ್ಲು ಶಿಕ್ಷೆ ನೀಡಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂತ್ರಸ್ತ ಯುವತಿಯ ಕುಟುಂಬಕ್ಕೆ ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಕನಿಷ್ಠ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು. ನಿರ್ಲಕ್ಷ್ಯ ತೋರಿದ್ದಲ್ಲಿ ಸಮಿತಿ ರಾಜ್ಯಾದ್ಯಂತ ತೀವ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗುತ್ತಿದೆ ಪದಾಧಿಕಾರಿಗಳು ಎಚ್ಚರಿಸಿದರು.

ರಾಷ್ಟ್ರೀಯ ಗೋರ್ ಬಂಜಾರ ಕ್ರಾಂತಿ ವಿಜಯನಗರ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶಿವಕುಮಾರ್,ಉಪಾಧ್ಯಕ್ಷ ಎಲ್.ವಿನಾಯಕ ಎಲ್ ಎಸ್ ಮಾತನಾಡಿದರು. ಸಮಿತಿ ಪದಾಧಿಕಾರಿಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಪದಾಧಿಕಾರಿಗಳು. ವಿಧ್ಯಾರ್ಥಿಗಳಾದ ಅಕ್ರಮ ಭಾಷಾ. ಗುರುರಾಜ್. ನಾಗರಾಜ್,  ಮಹೇಶ್, ಪ್ರಜ್ವಲ್, ಬಸವರಾಜ್,  ಅಜಯ್ ಪರಶುರಾಮ್, ವಿನೋದ್, ಮಂಜುನಾಥ್. ಇನ್ನಿತರ ವಿಧ್ಯಾರ್ಥಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು