12:41 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಮುಕ್ಕೋಟಿ ದ್ವಾದಶಿ: ಬಂಟ್ವಾಳದಲ್ಲಿ ಶ್ರೀ ದೇವರ ಸಹಿತ ಕಾಶೀ ಮಠಾಧೀಶರ ತೀರ್ಥ ಸ್ನಾನ

15/12/2021, 18:49

ಚಿತ್ರ : ಮಂಜು ನೀರೇಶ್ವಾಲ್ಯ ​​ಮಂಗಳೂರು(reporterkarnataka.com) : 

ಕರಾವಳಿಯ ಪುಣ್ಯಕ್ಷೇತ್ರಗಳಲ್ಲೊಂದಾದ ​ಬಂಟ್ವಾಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ‘ಮುಕ್ಕೋಟಿ ದ್ವಾದಶಿ’ ಉತ್ಸವ ಗಮನಸೆಳೆಯಿತು.​ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ  ಶ್ರೀ ದೇವರ ​ನೇತ್ರಾವತಿ ನದಿಯಲ್ಲಿ  ತೀರ್ಥ ಸ್ನಾನ​ ನಡೆಯಿತು.

ಬುಧವಾರ ವೈಕುಂಠ ಏಕಾದಶಿ ವೈಭವ ಇಂದು ಪ್ರಾತಃಕಾಲ ಶ್ರೀನಿವಾಸ ದೇವರ ಪಲ್ಲಕಿ ಉತ್ಸವವು ಭಕ್ತಸಮೂಹದ ಕಣ್ಮನ ಸೆಳೆಯಿತು. ಬಳಿಕ ಶ್ರೀ ದೇವರ ಸ್ವಯಂಸೇವಕರ ಭುಜ ಸೇವೆಯೊಂದಿಗೆ​ ​ಹಗಲು ಪೇಟೆ ಉತ್ಸವ ​ಬಳಿಕ ರಥೋತ್ಸವ ಜರಗಿತು.

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಆ ದಿನದಂದು ವೈಕುಂಠದ ಉತ್ತರ ದ್ವಾರ ತೆರೆಯುತ್ತದೆ. ದೇವತೆಗಳೆಲ್ಲ ಮಹಾವಿಷ್ಣುವಿನ ದರ್ಶನ ಪಡೆಯುವ ಸಲುವಾಗಿ ಆ ದ್ವಾರದ ಮೂಲಕ ತೆರಳುತ್ತಾರೆ. ಆದ್ದರಿಂದ ದೇವಾಲಯಗಳ ಉತ್ತರ ದಿಕ್ಕಿನ ದ್ವಾರಗಳನ್ನು ತೆರೆಯಲಾಗುತ್ತದೆ. ಆ ಮೂಲಕ ದರ್ಶನ ಪಡೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು