6:31 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿ: ಎಸಿ ಆದೇಶ

15/12/2021, 22:52

ಪುತ್ತೂರು(reporterkarnataka.com):

ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲ್ ಅವರು ಆದೇಶ ಹೊರಡಿಸಿದ್ದಾರೆ. 

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ದಲಾಯಿಸಿ ಪುತ್ತೂರು ಉಪ ವಿಭಾಗದಾದ್ಯಂತ ದಿನಾಂಕ:15/12/2021 ರಿಂದ ದಿನಾಂಕ:17/12/2011ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸುತ್ತೇನೆ ಎಂದು ಸಹಾಯಕ ಆಯುಕ್ತರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.

ಏನಿದೆ ಆದೇಶದಲ್ಲಿ ?: ಈ ಅವಧಿಯಲ್ಲಿ  ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ   ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತು ಗುಂಪು ಸೇರಬಾರದು ಅಥವಾ ಗುಂಪು ಸೇರುವುದನ್ನು ನಿಷೇಧಿಸಿದೆ.

ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ, ಗದೆ, ಕೋಲು, ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.

ಯಾವುದೇ ಸಾರ್ವಜನಿಕ ಮೇರವಣಿಗೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.

ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.

ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಬೇಷ್ಠ ಮಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು