11:29 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

Good News: ವೋಲ್ವೋ ಬಸ್ ಪ್ರಯಾಣ ದರ, ಪಾಸ್ ದರ ಇಳಿಕೆ; ಬೆಂಗಳೂರಿನಲ್ಲಿ ಒಟ್ಟು 173 ಎಸಿ ಬಸ್ ಆರಂಭ

16/12/2021, 08:35

ಬೆಂಗಳೂರು(reporterkarnataka.com):

ಬೆಂಗಳೂರು ನಗರದಲ್ಲಿನ ಹವಾನಿಯಂತ್ರಿತ (ವಜ್ರ) ಬಸ್ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ.

ವಜ್ರ ಸೇವೆಗಳ ಮೊದಲ ಮೂರು ಹಂತಗಳು, ಅಂದ್ರೆ 6 ಕಿ.ಮೀ ವರೆಗೆ ಒಂದೇ ಆಗಿರುತ್ತದೆ. ಹಂತ 4 (8 ಕಿಮೀ) ಮತ್ತು ಆಚೆಗೆ ಪ್ರಯಾಣಿಸುವ ಪ್ರಯಾಣಿಕರು ಪ್ರಯಾಣಿಸುವ ದೂರವನ್ನು ಅವಲಂಬಿಸಿ ರೂ 5 ರಿಂದ ರೂ 40 ರವರೆ ಬೆಲೆ ಇಳಿಕೆಯಾಗಲಿದೆ ತಿಳಿಸಿದೆ.

ವಜ್ರ ದಿನದ ಪಾಸ್‌ನ ಬೆಲೆಯನ್ನು 120 ರೂ.ನಿಂದ 100 ರೂ.ಗೆ ಇಳಿಸಲಾಗಿದ್ದು, ಮಾಸಿಕ ಪಾಸ್ ಬೆಲೆಯು 2000 ರೂ.ನಿಂದ 1500 ರೂ.ಗೆ ಕಡಿತಗೊಂಡಿದೆ. ಆದರೆ ಈ ರಿಯಾಯಿತಿಯು ವಿಮಾನ ನಿಲ್ದಾಣದ ಬಸ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಇನ್ನೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಾಮಾನ್ಯ ಮತ್ತು ವಾಯುವಜ್ರ ಸೇವೆಗಳ ಪ್ರಯಾಣದಲ್ಲಿ ಯಾವುದೇ ಬದಲಾವಣೆಗಳು ಇರೋದಿಲ್ಲ ಎಂದು ತಿಳಿಸಿದೆ. ಶುಕ್ರವಾರದಿಂದ 12 ಮಾರ್ಗಗಳಲ್ಲಿ 90 ಹೆಚ್ಚುವರಿ ಎಸಿ ಬಸ್ ಸೇವೆಗಳನ್ನು ಆರಂಭಿಸಲಾಗುವುದು ಅಂತ ತಿಳಿಸಿದ್ದು, ಇದರೊಂದಿಗೆ ನಗರದಲ್ಲಿ ಒಟ್ಟು 173 ಎಸಿ ಬಸ್‌ಗಳು ಸಂಚಾರ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು