10:36 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು

17/12/2021, 18:43

ಸಾಂದರ್ಭಿಕ ಚಿತ್ರ
ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು. ಇದರಿಂದ ಭಯಭೀತರಾದ ಗ್ರಾಮಸ್ಥರ. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ಪ್ರತಿಭಟನೆ ಹಿನ್ನಲೆಯಲ್ಲಿ ಸಾಕಾನೆಗಳ ಸಹಕಾರದಿಂದ ಅರಣ್ಯ ಇಲಾಖೆಯು ಗುರುವಾರ ಸಂಜೆ ಹುಲಿ ಸೆರೆಗೆ ಕಾರ್ಯಾಚರಣೆ. ನಡೆಸಿತ್ತು. 

ಮತ್ತಿಗೋಡು ಶಿಬಿರದ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಆಡುಗಳನ್ನು ಬಲಿ ತೆಗೆದುಕೊಂಡಿದ್ದ ಸ್ಥಳದಲ್ಲೇ ಅಡಗಿದ್ದ ಹುಲಿಯನ್ನು ತಜ್ಞರ ನೆರವಿನಿಂದ ಅರಿವಳಿಕೆ ನೀಡಿ ಸೆರೆಹಿಡಿದರು. 

ಸೆರೆಸಿಕ್ಕ ಹೆಣ್ಣು ಹುಲಿ ಅಂದಾಜು 10 ವಷ೯ ಪ್ರಾಯದ್ದಾಗಿದೆ. 
ವ್ಯಾಘ್ರ ಸೆರೆಯಾದ ಹಿನ್ನಲೆಯಲ್ಲಿ ನಾಣಚ್ಚಿ ಹಾಡಿ ವ್ಯಾಪ್ತಿಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಸೆರೆಹಿಡಿಯಲಾದ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು