7:58 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು

17/12/2021, 18:43

ಸಾಂದರ್ಭಿಕ ಚಿತ್ರ
ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು. ಇದರಿಂದ ಭಯಭೀತರಾದ ಗ್ರಾಮಸ್ಥರ. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ಪ್ರತಿಭಟನೆ ಹಿನ್ನಲೆಯಲ್ಲಿ ಸಾಕಾನೆಗಳ ಸಹಕಾರದಿಂದ ಅರಣ್ಯ ಇಲಾಖೆಯು ಗುರುವಾರ ಸಂಜೆ ಹುಲಿ ಸೆರೆಗೆ ಕಾರ್ಯಾಚರಣೆ. ನಡೆಸಿತ್ತು. 

ಮತ್ತಿಗೋಡು ಶಿಬಿರದ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಆಡುಗಳನ್ನು ಬಲಿ ತೆಗೆದುಕೊಂಡಿದ್ದ ಸ್ಥಳದಲ್ಲೇ ಅಡಗಿದ್ದ ಹುಲಿಯನ್ನು ತಜ್ಞರ ನೆರವಿನಿಂದ ಅರಿವಳಿಕೆ ನೀಡಿ ಸೆರೆಹಿಡಿದರು. 

ಸೆರೆಸಿಕ್ಕ ಹೆಣ್ಣು ಹುಲಿ ಅಂದಾಜು 10 ವಷ೯ ಪ್ರಾಯದ್ದಾಗಿದೆ. 
ವ್ಯಾಘ್ರ ಸೆರೆಯಾದ ಹಿನ್ನಲೆಯಲ್ಲಿ ನಾಣಚ್ಚಿ ಹಾಡಿ ವ್ಯಾಪ್ತಿಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಸೆರೆಹಿಡಿಯಲಾದ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು