8:54 AM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು

17/12/2021, 18:43

ಸಾಂದರ್ಭಿಕ ಚಿತ್ರ
ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು. ಇದರಿಂದ ಭಯಭೀತರಾದ ಗ್ರಾಮಸ್ಥರ. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ಪ್ರತಿಭಟನೆ ಹಿನ್ನಲೆಯಲ್ಲಿ ಸಾಕಾನೆಗಳ ಸಹಕಾರದಿಂದ ಅರಣ್ಯ ಇಲಾಖೆಯು ಗುರುವಾರ ಸಂಜೆ ಹುಲಿ ಸೆರೆಗೆ ಕಾರ್ಯಾಚರಣೆ. ನಡೆಸಿತ್ತು. 

ಮತ್ತಿಗೋಡು ಶಿಬಿರದ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಆಡುಗಳನ್ನು ಬಲಿ ತೆಗೆದುಕೊಂಡಿದ್ದ ಸ್ಥಳದಲ್ಲೇ ಅಡಗಿದ್ದ ಹುಲಿಯನ್ನು ತಜ್ಞರ ನೆರವಿನಿಂದ ಅರಿವಳಿಕೆ ನೀಡಿ ಸೆರೆಹಿಡಿದರು. 

ಸೆರೆಸಿಕ್ಕ ಹೆಣ್ಣು ಹುಲಿ ಅಂದಾಜು 10 ವಷ೯ ಪ್ರಾಯದ್ದಾಗಿದೆ. 
ವ್ಯಾಘ್ರ ಸೆರೆಯಾದ ಹಿನ್ನಲೆಯಲ್ಲಿ ನಾಣಚ್ಚಿ ಹಾಡಿ ವ್ಯಾಪ್ತಿಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಸೆರೆಹಿಡಿಯಲಾದ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು