4:25 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಶ್ರೀಸೊಲ್ಲಮ್ಮಗುಡಿ ಸರಕಾರಿ ಶಾಲೆ ಮುಖ್ಯ ಶಿಕ್ಷಕಿಯ ಅನುಚಿತ ವರ್ತನೆ: ಪೋಷಕರಿಂದ ಆರೋಪ, ಪ್ರತಿಭಟನೆ

17/12/2021, 21:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಸೊಲ್ಲಮ್ಮಗುಡಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಜಿನಾಬಿ ಅವರು ಮಕ್ಕಳನ್ನು ಶಾಲಾ ಸಮವಸ್ತ್ರ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ಶಾಲೆಯಿಂದ ಹೊರನಿಲ್ಲಿಸಿ ದುರ್ನಡತೆಯಿಂದ ವರ್ತಿಸಿದ್ದಾರೆ ಹಾಗೂ ಪೋಷಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಯ ಕೆಲ ವಿದ್ಯಾರ್ಥಿಗಳ ಪೋಷಕರು ಸಾರ್ವಜನಿಕರು ಹಾಗೂ ಎಸ್ಡಿ ಎಮ್ಸಿ ಅಧ್ಯಕ್ಷರ ನೇತೃತ್ವದಲ್ಲಿ ಶಾಲಾವರಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಮುಖ್ಯ ಶಿಕ್ಷಕಿ ಶಾಲಾವಧಿಯಲ್ಲಿ ಶಾಲೆಗೆ ಹಾಜರಾಗೋದಿಲ್ಲ. ವಿನಾ ಕಾರಣ ವಿಳಂಬ ಮಾಡುತ್ತಿದ್ದಾರೆ ಮತ್ತು ಪೋಷಕರೊಂದಿಗೆ ಅನಗತ್ಯ ಉದ್ಧಟನದಿಂದ ವರ್ತಿಸುತ್ತಿದ್ದಾರೆಂದು ಕೆಲ ವಿದ್ಯಾರ್ಥಿಗಳ ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ. ತಾನು ಭಾರೀ ಪ್ರಭಾವಿ ರಾಜಕೀಯದವರ ಬೆಂಬಲ ಉಳ್ಳವಳಾಗಿದ್ದು, ನಾನಿರೋದೆ ಹಾಗೇ ನನ್ನಿಷ್ಟದಂತೆ ನಾನಿರುವೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಸಂಬಂಧಿಸಿದಂತೆ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ. ಬಿಇಓ ಅಲ್ಲ ಯಾವ ಶಿಕ್ಷಣಾಧಿಕಾರಿ ಯಾವ ಎಸ್ಡಿಎಮ್ಸಿಯವರು ಏನೂ ಮಾಡೋಕಾಗಲ್ಲ ಎಂಬಿತ್ಯಾದಿಯಾಗಿ, ಈ ಶಿಕ್ಷಕಿ ಬಹು ಅಶಿಸ್ತಿನಿಂದ ಶಾಲಾವಧಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಹಾಗೂ ತಮ್ಮೊಂದಿಗೆ ವರ್ತಿಸುತ್ತಿದ್ದಾರೆಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ. ಈ ಸಂಬಂಧಿಸಿದಂತೆ ಕೆಲ ಸಾರ್ವಜನಿಕರು ಮಾತನಾಡಿದ್ದು, ಮುಖ್ಯ ಶಿಕ್ಷಕರು  ಈ ಶಾಲೆಗೆ ಬಂದಾಗಿನಿಂದ ಶಾಲಾ ವಾತಾವರಣ ತುಂಬಾ ಹದಗೆಟ್ಟಿದೆ, ಶಿಸ್ತನ್ನು ಪರಿಪಾಲಿಸಬೇಕಾಗಿರುವ ಶಿಕ್ಷಕರೇ ಹೀಗೆ ಅಶಿಸ್ಥಿನಿಂದ ವರ್ತಿಸುತ್ತಿದ್ದಾರೆ ಎಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

ಮುಖ್ಯ ಶಿಕ್ಷಕರ ಉದ್ಧಟತನದಿಂದಾಗಿ ಹಾಗೂ ಅವರ ಅಶಿಸ್ತಿನ ವರ್ತನೆಯ  ಪರಿಣಾಮ, ಶಾಲೆಯ ಸ್ಥಿತಿಗತಿ ಅಧೋಗತಿ ತಲುಪಿದೆ. ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ. ಈ ಅಶಿಸ್ಥಿನ ಮುಖ್ಯ ಶಿಕ್ಷಕಿಯಿಂದಾಗಿ ಶಾಲೆ ದುಸ್ಥಿತಿಗೆ ಈಡಾಗಲಿದ್ದು,ಹೀಗೆ ಮುಂದುವರೆದಲ್ಲಿ ಶಾಲೆ ಮುಚ್ಚುವಂತಹ ದುಸ್ಥಿತಿ ನಿರ್ಮಾಣವಾಗಬಹುದೆಂಬ ಆತಂಕ ತಮ್ಮನ್ನು ಕಾಡುತ್ತಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವಿದ್ಯಾರ್ಥಿಗಳ ಪೋಷಕರು ಹಾಗೂ ಕೆಲ ಎಸ್ಡಿ ಎಮ್ಸಿ ಸದಸ್ಯರು, ಸಾರ್ವಜನಿಕರು ಕೆಲ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತಿರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು