3:54 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಶ್ರೀಸೊಲ್ಲಮ್ಮಗುಡಿ ಸರಕಾರಿ ಶಾಲೆ ಮುಖ್ಯ ಶಿಕ್ಷಕಿಯ ಅನುಚಿತ ವರ್ತನೆ: ಪೋಷಕರಿಂದ ಆರೋಪ, ಪ್ರತಿಭಟನೆ

17/12/2021, 21:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಸೊಲ್ಲಮ್ಮಗುಡಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಜಿನಾಬಿ ಅವರು ಮಕ್ಕಳನ್ನು ಶಾಲಾ ಸಮವಸ್ತ್ರ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ಶಾಲೆಯಿಂದ ಹೊರನಿಲ್ಲಿಸಿ ದುರ್ನಡತೆಯಿಂದ ವರ್ತಿಸಿದ್ದಾರೆ ಹಾಗೂ ಪೋಷಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಯ ಕೆಲ ವಿದ್ಯಾರ್ಥಿಗಳ ಪೋಷಕರು ಸಾರ್ವಜನಿಕರು ಹಾಗೂ ಎಸ್ಡಿ ಎಮ್ಸಿ ಅಧ್ಯಕ್ಷರ ನೇತೃತ್ವದಲ್ಲಿ ಶಾಲಾವರಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಮುಖ್ಯ ಶಿಕ್ಷಕಿ ಶಾಲಾವಧಿಯಲ್ಲಿ ಶಾಲೆಗೆ ಹಾಜರಾಗೋದಿಲ್ಲ. ವಿನಾ ಕಾರಣ ವಿಳಂಬ ಮಾಡುತ್ತಿದ್ದಾರೆ ಮತ್ತು ಪೋಷಕರೊಂದಿಗೆ ಅನಗತ್ಯ ಉದ್ಧಟನದಿಂದ ವರ್ತಿಸುತ್ತಿದ್ದಾರೆಂದು ಕೆಲ ವಿದ್ಯಾರ್ಥಿಗಳ ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ. ತಾನು ಭಾರೀ ಪ್ರಭಾವಿ ರಾಜಕೀಯದವರ ಬೆಂಬಲ ಉಳ್ಳವಳಾಗಿದ್ದು, ನಾನಿರೋದೆ ಹಾಗೇ ನನ್ನಿಷ್ಟದಂತೆ ನಾನಿರುವೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಸಂಬಂಧಿಸಿದಂತೆ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ. ಬಿಇಓ ಅಲ್ಲ ಯಾವ ಶಿಕ್ಷಣಾಧಿಕಾರಿ ಯಾವ ಎಸ್ಡಿಎಮ್ಸಿಯವರು ಏನೂ ಮಾಡೋಕಾಗಲ್ಲ ಎಂಬಿತ್ಯಾದಿಯಾಗಿ, ಈ ಶಿಕ್ಷಕಿ ಬಹು ಅಶಿಸ್ತಿನಿಂದ ಶಾಲಾವಧಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಹಾಗೂ ತಮ್ಮೊಂದಿಗೆ ವರ್ತಿಸುತ್ತಿದ್ದಾರೆಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ. ಈ ಸಂಬಂಧಿಸಿದಂತೆ ಕೆಲ ಸಾರ್ವಜನಿಕರು ಮಾತನಾಡಿದ್ದು, ಮುಖ್ಯ ಶಿಕ್ಷಕರು  ಈ ಶಾಲೆಗೆ ಬಂದಾಗಿನಿಂದ ಶಾಲಾ ವಾತಾವರಣ ತುಂಬಾ ಹದಗೆಟ್ಟಿದೆ, ಶಿಸ್ತನ್ನು ಪರಿಪಾಲಿಸಬೇಕಾಗಿರುವ ಶಿಕ್ಷಕರೇ ಹೀಗೆ ಅಶಿಸ್ಥಿನಿಂದ ವರ್ತಿಸುತ್ತಿದ್ದಾರೆ ಎಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

ಮುಖ್ಯ ಶಿಕ್ಷಕರ ಉದ್ಧಟತನದಿಂದಾಗಿ ಹಾಗೂ ಅವರ ಅಶಿಸ್ತಿನ ವರ್ತನೆಯ  ಪರಿಣಾಮ, ಶಾಲೆಯ ಸ್ಥಿತಿಗತಿ ಅಧೋಗತಿ ತಲುಪಿದೆ. ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ. ಈ ಅಶಿಸ್ಥಿನ ಮುಖ್ಯ ಶಿಕ್ಷಕಿಯಿಂದಾಗಿ ಶಾಲೆ ದುಸ್ಥಿತಿಗೆ ಈಡಾಗಲಿದ್ದು,ಹೀಗೆ ಮುಂದುವರೆದಲ್ಲಿ ಶಾಲೆ ಮುಚ್ಚುವಂತಹ ದುಸ್ಥಿತಿ ನಿರ್ಮಾಣವಾಗಬಹುದೆಂಬ ಆತಂಕ ತಮ್ಮನ್ನು ಕಾಡುತ್ತಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವಿದ್ಯಾರ್ಥಿಗಳ ಪೋಷಕರು ಹಾಗೂ ಕೆಲ ಎಸ್ಡಿ ಎಮ್ಸಿ ಸದಸ್ಯರು, ಸಾರ್ವಜನಿಕರು ಕೆಲ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತಿರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು