3:41 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಶ್ರೀಸೊಲ್ಲಮ್ಮಗುಡಿ ಸರಕಾರಿ ಶಾಲೆ ಮುಖ್ಯ ಶಿಕ್ಷಕಿಯ ಅನುಚಿತ ವರ್ತನೆ: ಪೋಷಕರಿಂದ ಆರೋಪ, ಪ್ರತಿಭಟನೆ

17/12/2021, 21:53

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಸೊಲ್ಲಮ್ಮಗುಡಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಜಿನಾಬಿ ಅವರು ಮಕ್ಕಳನ್ನು ಶಾಲಾ ಸಮವಸ್ತ್ರ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ಶಾಲೆಯಿಂದ ಹೊರನಿಲ್ಲಿಸಿ ದುರ್ನಡತೆಯಿಂದ ವರ್ತಿಸಿದ್ದಾರೆ ಹಾಗೂ ಪೋಷಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಯ ಕೆಲ ವಿದ್ಯಾರ್ಥಿಗಳ ಪೋಷಕರು ಸಾರ್ವಜನಿಕರು ಹಾಗೂ ಎಸ್ಡಿ ಎಮ್ಸಿ ಅಧ್ಯಕ್ಷರ ನೇತೃತ್ವದಲ್ಲಿ ಶಾಲಾವರಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಮುಖ್ಯ ಶಿಕ್ಷಕಿ ಶಾಲಾವಧಿಯಲ್ಲಿ ಶಾಲೆಗೆ ಹಾಜರಾಗೋದಿಲ್ಲ. ವಿನಾ ಕಾರಣ ವಿಳಂಬ ಮಾಡುತ್ತಿದ್ದಾರೆ ಮತ್ತು ಪೋಷಕರೊಂದಿಗೆ ಅನಗತ್ಯ ಉದ್ಧಟನದಿಂದ ವರ್ತಿಸುತ್ತಿದ್ದಾರೆಂದು ಕೆಲ ವಿದ್ಯಾರ್ಥಿಗಳ ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ. ತಾನು ಭಾರೀ ಪ್ರಭಾವಿ ರಾಜಕೀಯದವರ ಬೆಂಬಲ ಉಳ್ಳವಳಾಗಿದ್ದು, ನಾನಿರೋದೆ ಹಾಗೇ ನನ್ನಿಷ್ಟದಂತೆ ನಾನಿರುವೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಸಂಬಂಧಿಸಿದಂತೆ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ. ಬಿಇಓ ಅಲ್ಲ ಯಾವ ಶಿಕ್ಷಣಾಧಿಕಾರಿ ಯಾವ ಎಸ್ಡಿಎಮ್ಸಿಯವರು ಏನೂ ಮಾಡೋಕಾಗಲ್ಲ ಎಂಬಿತ್ಯಾದಿಯಾಗಿ, ಈ ಶಿಕ್ಷಕಿ ಬಹು ಅಶಿಸ್ತಿನಿಂದ ಶಾಲಾವಧಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಹಾಗೂ ತಮ್ಮೊಂದಿಗೆ ವರ್ತಿಸುತ್ತಿದ್ದಾರೆಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ. ಈ ಸಂಬಂಧಿಸಿದಂತೆ ಕೆಲ ಸಾರ್ವಜನಿಕರು ಮಾತನಾಡಿದ್ದು, ಮುಖ್ಯ ಶಿಕ್ಷಕರು  ಈ ಶಾಲೆಗೆ ಬಂದಾಗಿನಿಂದ ಶಾಲಾ ವಾತಾವರಣ ತುಂಬಾ ಹದಗೆಟ್ಟಿದೆ, ಶಿಸ್ತನ್ನು ಪರಿಪಾಲಿಸಬೇಕಾಗಿರುವ ಶಿಕ್ಷಕರೇ ಹೀಗೆ ಅಶಿಸ್ಥಿನಿಂದ ವರ್ತಿಸುತ್ತಿದ್ದಾರೆ ಎಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

ಮುಖ್ಯ ಶಿಕ್ಷಕರ ಉದ್ಧಟತನದಿಂದಾಗಿ ಹಾಗೂ ಅವರ ಅಶಿಸ್ತಿನ ವರ್ತನೆಯ  ಪರಿಣಾಮ, ಶಾಲೆಯ ಸ್ಥಿತಿಗತಿ ಅಧೋಗತಿ ತಲುಪಿದೆ. ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎಂದು ಕೆಲ ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ. ಈ ಅಶಿಸ್ಥಿನ ಮುಖ್ಯ ಶಿಕ್ಷಕಿಯಿಂದಾಗಿ ಶಾಲೆ ದುಸ್ಥಿತಿಗೆ ಈಡಾಗಲಿದ್ದು,ಹೀಗೆ ಮುಂದುವರೆದಲ್ಲಿ ಶಾಲೆ ಮುಚ್ಚುವಂತಹ ದುಸ್ಥಿತಿ ನಿರ್ಮಾಣವಾಗಬಹುದೆಂಬ ಆತಂಕ ತಮ್ಮನ್ನು ಕಾಡುತ್ತಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವಿದ್ಯಾರ್ಥಿಗಳ ಪೋಷಕರು ಹಾಗೂ ಕೆಲ ಎಸ್ಡಿ ಎಮ್ಸಿ ಸದಸ್ಯರು, ಸಾರ್ವಜನಿಕರು ಕೆಲ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತಿರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು