6:04 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು

18/12/2021, 09:48

ಮೈಸೂರು(reporterkarnataka.com):

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ನಕಲಿ ನಂದಿನಿ ತಪ್ಪ ತಯಾರಿಸುತ್ತಿದ್ದ ಪ್ರಕರಣದ ಬಗ್ಗೆ ನೇರವಾಗಿ ಎಸ್ಪಿಗೆ ದೂರು ನೀಡಿದ್ದೇನೆ. ಪ್ರಕರಣ ಸಂಬoಧ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ಮೇಲೆ ಎಫ್‌ಐಆರ್ ಆಗಿದೆ.

ಮೈಸೂರಿನ ಹೊರವಲಯದ ಹೊಸಹುಂಡಿಯಲ್ಲಿ ನಕಲಿ ತುಪ್ಪ ತಯಾರಿಕೆ ಕಂಡು ಬಂದಿದೆ. ಅಲ್ಲಿಗೂ ನಾವು ಭೇಟಿ ನೀಡಿ, ನಕಲಿ ತುಪ್ಪ ತಯಾರಿಕೆ ಘಟಕವನ್ನ ಸೀಜ್ ಮಾಡಿಸಿದ್ದೇವೆ. ಇದೇ ಮೊದಲು ಈ ಇಂತಹ ಕಲಬೆರಕೆ ಜಾಲ ಕಂಡು ಬಂದಿರೋದು. ಸರ್ಕಾರದ ಮಟ್ಟದಲ್ಲಿ ತನಿಖೆಗೆ ಮನವಿ ಮಾಡಿದ್ದೇವೆ. ಗೋದಾಮಿನಲ್ಲಿ ಸಿಕ್ಕಂತಹ ಎಲ್ಲಾ ನಕಲಿ ವಸ್ತುಗಳನ್ನ ಸೀಜ್ ಮಾಡುವಂತಹ ಕೆಲಸವಾಗಿದೆ. ಫುಡ್ ಡಿಪಾರ್ಟ್ಮೆಂಟ್‌ಗೂ ಮಾದರಿಯನ್ನ ಕಳುಹಿಸಲಾಗಿದೆ. ಮೇಲ್ನೋಟಕ್ಕೆ ಡಾಲ್ಡಾ, ಪಾಮ್ ಆಯಿಲ್ ನಂತಹ ವಸ್ತುಗಳನ್ನು ಬಳಸಿದ್ದಾರೆ. ಇಲ್ಲಿ ತಯಾರಾದ ನಕಲಿ ತುಪ್ಪ ಎಲ್ಲೆಲ್ಲಿ ಪೂರೈಕೆಯಾಗುತ್ತಿತ್ತು. ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದರ ತನಿಖೆಯಾಗುತ್ತಿದೆ. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ, ಜೈಲಿಗೆ ಕಳುಹಿಸುತ್ತೇವೆ. ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಂಡು, ಅವರನ್ನು ಸೇವೆಯಿಂದಲೇ ವಜಾ ಮಾಡುತ್ತೇವೆ. ಅಲ್ಲದೇ ಜೈಲಿಗೂ ಕಳುಹಿಸುತ್ತೇವೆ ಎಂದು ಗುಡುಗಿದರು.

ಇಂತಹ ಅಕ್ರಮಗಳನ್ನ ತಡೆಯಲು ವಿಜುಲಿಯನ್ಸ್ ಟೀಂ ಚುರುಕುಗೊಳಿಸುತ್ತೇವೆ ಎಂದರು

ಪ್ರತಿ ವಾರಕ್ಕೊಮ್ಮೆ ಎಲ್ಲಾ ಮಿಲ್ಕ್ ಪಾರ್ಲರ್‌ಗಳಿಗೆ ಭೇಟಿ ಕೊಟ್ಟು ಪರಿಶೀಲಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಲು ಬಗ್ಗೆ ಪ್ರತಿ ವಾರ ಉತ್ಪನ್ನಗಳನ್ನ ಲ್ಯಾಬ್‌ಗೆ ತಂದು ಪರಿಶೀಲಿಸುತ್ತೇವೆ. ಕೂಲಂಕುಶವಾಗಿ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರ ತರುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ರೈತರು, ಗ್ರಾಹಕರು ಮೈಮುಲ್ ಗೆ ಎರಡು ಕಣ್ಣುಗಳಿದ್ದಂತೆ. ಇಬ್ಬರ ವಿಶ್ವಾಸವನ್ನ ಮೈಮುಲ್ ಕಾಪಾಡಿಕೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು