9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು-ಮುಂಬೈಗೆ ಮಲ್ಟಿ ಆಕ್ಸೆಲ್ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭ: ಪ್ರಯಾಣ ದರ ಎಷ್ಟು ಗೊತ್ತೇ? 

18/12/2021, 09:51

ಮಂಗಳೂರು (reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.

ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಿಗ್ಗೆ 7 ಕ್ಕೆ ತಲುಪುತ್ತದೆ. 

 ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಿಗ್ಗೆ 6.30ಕ್ಕೆ ತಪುಪಲಿದೆ ನಂತರ ಮೂಡಬಿದ್ರೆಯಿಂದ ಬೆಳಿಗ್ಗೆ 7ಕ್ಕೆ ಹೊರಟು ಮಂಗಳೂರಿಗೆ ಬೆಳಿಗ್ಗೆ 8 ಗಂಟೆಗೆ ತಲುಪುತ್ತದೆ.  

 ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. 

ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು