8:00 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು

18/12/2021, 15:51

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಮಹಾರಾಷ್ಟ್ರದ ಸಿಎಂ ಉದ್ದವ ಠಾಕ್ರೆ ಪ್ರತಿಮೆಗೆ ಚಪ್ಪಲಿಯಿಂದ ಹೊಡೆದು ಕರವೇ ಹಾಗೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೆಂಕಿ ಹಚ್ಚಿದರು.

ಕಾಗವಾಡ ಪಟ್ಟಣದಲ್ಲಿ ಮರಾಠಿ ಬೋರ್ಡ್ಗಳನ್ನು ಕಿತ್ತು ಹಾಕಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಶಿವಸೇನೆಗೆ ಧಿಕ್ಕಾರ ಕೂಗಿ ಗಡಿಯಲ್ಲಿ ಕರವೇ ಇತರೆ ಕನ್ನಡ ಸಂಘಟನೆಯ ಕಾರ್ಯಕರ್ತರು ಆಕ್ರೋಶ ಹೊರಗೆಡಹಿದರು.

ಗಡಿಯಲ್ಲಿ ಬಿಗುವಿನ ವಾತಾವರಣ ನೆಲೆಸಿದೆ. ಕರ್ನಾಟಕದ ವಾಹನಗಳು ಮಹಾರಾಷ್ಟ್ರಕ್ಕೆ, ಮಹಾರಾಷ್ಟ್ರದ ವಾಹನಗಳನ್ನು ಕರ್ನಾಟಕಕ್ಕೆ ಸಂಚರಿಸಿದಂತೆ ಪೊಲೀಸರಿಂದ ನಿರ್ಭಂಧ ಹೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು