7:45 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಗೋಣಮಾಕನಹಳ್ಳ: ಹೆಣ್ಣಿನ ವಿಷಯದಲ್ಲಿ ನಡೆದ ಕೊಲೆ ಪ್ರಕರಣ; 3 ಮಂದಿ ಆರೋಪಿಗಳ ಬಂಧನ

19/12/2021, 09:48

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೆಜಿಎಫ್ ಪೊಲೀಸ್‌ ಜಿಲ್ಲೆಯ ಆಂಡಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಡಿ .17ರಂದು ಮಧ್ಯಾಹ್ನ ಹೆಣ್ಣಿನ ವಿಷಯದಲ್ಲಿ ಆದ ಗಲಾಟೆಯ ಹಿನ್ನೆಲೆಯಲ್ಲಿ ಕೊಲೆ ನಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳಲ್ಲಿ ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್‌ ಬಾಬು ಅವರು ತಿಳಿಸಿದ್ದಾರೆ. 

ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆಂಡಸನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಣಮಾಕನಹಳ್ಳಿಯ ನಿವಾಸಿ ಗಜೇಂದ್ರನಾಯ್ಡು ಅವರು ತನ್ನ ಮನೆಯ ಬಳಿ ಡಿ .17 ರಂದು ಮದ್ಯಾಹ್ನ 2.30 ರ ಸುಮಾರಿನಲ್ಲಿ ಬರುತ್ತಿರುವಾಗ , ಅದೇ ಗ್ರಾಮ ಗೋಣಮಾಕನಹಳ್ಳಿಯ ನಿವಾಸಿಗಳಾದ ರಾಘವೇಂದ್ರ ( 22  ) , ಹರೀಶ್ ( 23 )  ಹಾಗೂ ಜಿ.ಮಂಜುನಾಥ ( 21 )  ಅವರುಗಳು ಒಂದು ಹೆಣ್ಣಿನ ವಿಷಯದಲ್ಲಿ ಗಜೇಂದ್ರನಾಯ್ಡು ಸ್ವಾಮಿ ಅವರನ್ನು ಅಡ್ಡಗಟ್ಟಿ ದಾಳಿ ಮಾಡಿ ಗ್ರಾಮದ ಜಯರಾಮ್  ಅವರ ನೀಲಗಿರಿ ತೋಪಿಗೆ ಕರೆದುಕೊಂಡೋಗಿ ಚಾಕುಗಳಿಂದ ಕುತ್ತಿಗೆ ಕೋಯ್ದು , ಚೆನ್ನಾಗಿ ಹೊಡೆದು ಕೊಲೆ ಮಾಡಿ ಸಾಯಿಸಿದ್ದರು ಎಂದು ಆರೋಪಿಸಲಾಗಿದೆ.


ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಮಾರ್ಗದರ್ಶನದಲ್ಲಿ , ಡಿವೈಎಸ್ಪಿ ಪಿ.ಮುರಳೀಧರ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ಅಪರಾಧ ಪತ್ತೆ ತಂಡದ ರಾಬರ್ಟ್‌ಸನ್‌ಪೇಟೆ ಸಿಪಿಐ ಕೆ.ನಾಗರಾಜ್ , ಸಿಬ್ಬಂದಿಗಳಾದ ಮ್ಯಾಥ್ಯ ಅಲೆಕ್ಸಾಂಡರ್ , ನಾರಾಯಣಸ್ವಾಮಿ , ಟಿ.ಶಿವಯ್ಯ ಗಜೇಂದ್ರ , ಗೋಪಾಲಕೃಷ್ಣ , ಮಧುಸೂಧನ್ , ರಾಜೇಶ್‌ಬಾಬು , ಸುನಿಲ್ , ಮಹೇಂದ್ರ , ರಘು , ಮುರಳಿ , ಎಸ್.ಗಜೇಂದ್ರ , ಚಂದ್ರಕುಮಾರ್ , ಪ್ರಭಾಕರ್ , ಸತ್ಯಪ್ರಕಾಶ್ ಅವರುಗಳು ತೀವ್ರ ಕಾರ್ಯಾಚರಣೆ ನಡೆಸಿ , ಕೊಲೆ ಪ್ರಕರಣದ ಆರೋಪಿಗಳು ರಾಘವೇಂದ್ರ , ಹರೀಶ್ , ಮಂಜುನಾಥ ರವರುಗಳನ್ನು ಆಂದಪದೇಶದ ಶಾಂತಿಪುರಂನಲ್ಲಿ ಡಿ .18 ರಂದು ಪೊಲೀಸರು ಬಂಧಿಸಿ , ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ನಾ ಕಿಶೋರ್ ಬಾಬು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು