3:58 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಗೋಣಮಾಕನಹಳ್ಳ: ಹೆಣ್ಣಿನ ವಿಷಯದಲ್ಲಿ ನಡೆದ ಕೊಲೆ ಪ್ರಕರಣ; 3 ಮಂದಿ ಆರೋಪಿಗಳ ಬಂಧನ

19/12/2021, 09:48

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೆಜಿಎಫ್ ಪೊಲೀಸ್‌ ಜಿಲ್ಲೆಯ ಆಂಡಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಡಿ .17ರಂದು ಮಧ್ಯಾಹ್ನ ಹೆಣ್ಣಿನ ವಿಷಯದಲ್ಲಿ ಆದ ಗಲಾಟೆಯ ಹಿನ್ನೆಲೆಯಲ್ಲಿ ಕೊಲೆ ನಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳಲ್ಲಿ ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್‌ ಬಾಬು ಅವರು ತಿಳಿಸಿದ್ದಾರೆ. 

ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆಂಡಸನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಣಮಾಕನಹಳ್ಳಿಯ ನಿವಾಸಿ ಗಜೇಂದ್ರನಾಯ್ಡು ಅವರು ತನ್ನ ಮನೆಯ ಬಳಿ ಡಿ .17 ರಂದು ಮದ್ಯಾಹ್ನ 2.30 ರ ಸುಮಾರಿನಲ್ಲಿ ಬರುತ್ತಿರುವಾಗ , ಅದೇ ಗ್ರಾಮ ಗೋಣಮಾಕನಹಳ್ಳಿಯ ನಿವಾಸಿಗಳಾದ ರಾಘವೇಂದ್ರ ( 22  ) , ಹರೀಶ್ ( 23 )  ಹಾಗೂ ಜಿ.ಮಂಜುನಾಥ ( 21 )  ಅವರುಗಳು ಒಂದು ಹೆಣ್ಣಿನ ವಿಷಯದಲ್ಲಿ ಗಜೇಂದ್ರನಾಯ್ಡು ಸ್ವಾಮಿ ಅವರನ್ನು ಅಡ್ಡಗಟ್ಟಿ ದಾಳಿ ಮಾಡಿ ಗ್ರಾಮದ ಜಯರಾಮ್  ಅವರ ನೀಲಗಿರಿ ತೋಪಿಗೆ ಕರೆದುಕೊಂಡೋಗಿ ಚಾಕುಗಳಿಂದ ಕುತ್ತಿಗೆ ಕೋಯ್ದು , ಚೆನ್ನಾಗಿ ಹೊಡೆದು ಕೊಲೆ ಮಾಡಿ ಸಾಯಿಸಿದ್ದರು ಎಂದು ಆರೋಪಿಸಲಾಗಿದೆ.


ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಮಾರ್ಗದರ್ಶನದಲ್ಲಿ , ಡಿವೈಎಸ್ಪಿ ಪಿ.ಮುರಳೀಧರ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ಅಪರಾಧ ಪತ್ತೆ ತಂಡದ ರಾಬರ್ಟ್‌ಸನ್‌ಪೇಟೆ ಸಿಪಿಐ ಕೆ.ನಾಗರಾಜ್ , ಸಿಬ್ಬಂದಿಗಳಾದ ಮ್ಯಾಥ್ಯ ಅಲೆಕ್ಸಾಂಡರ್ , ನಾರಾಯಣಸ್ವಾಮಿ , ಟಿ.ಶಿವಯ್ಯ ಗಜೇಂದ್ರ , ಗೋಪಾಲಕೃಷ್ಣ , ಮಧುಸೂಧನ್ , ರಾಜೇಶ್‌ಬಾಬು , ಸುನಿಲ್ , ಮಹೇಂದ್ರ , ರಘು , ಮುರಳಿ , ಎಸ್.ಗಜೇಂದ್ರ , ಚಂದ್ರಕುಮಾರ್ , ಪ್ರಭಾಕರ್ , ಸತ್ಯಪ್ರಕಾಶ್ ಅವರುಗಳು ತೀವ್ರ ಕಾರ್ಯಾಚರಣೆ ನಡೆಸಿ , ಕೊಲೆ ಪ್ರಕರಣದ ಆರೋಪಿಗಳು ರಾಘವೇಂದ್ರ , ಹರೀಶ್ , ಮಂಜುನಾಥ ರವರುಗಳನ್ನು ಆಂದಪದೇಶದ ಶಾಂತಿಪುರಂನಲ್ಲಿ ಡಿ .18 ರಂದು ಪೊಲೀಸರು ಬಂಧಿಸಿ , ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ನಾ ಕಿಶೋರ್ ಬಾಬು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು