7:45 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು