2:04 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ

20/12/2021, 11:38

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು.

 ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು ಬೆಂಗಳೂರು ಮಾರ್ಗವಾಗಿ ಕೊಡ್ಲಿಪೇಟೆ ಮೂಲಕ  ಶನಿವಾರಸಂತೆಯ ಕೆ. ಆರ್. ಸಿ. ಸರ್ಕಲ್ ತಲುಪಿತು. ನಂತರ ಕೆ ಆರ್ ಸಿ ಸರ್ಕಲ್ ನಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.   ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಹೇಶ್ ವಹಿಸಿದ್ದರು . 1971ರ ಯುದ್ಧ ದಲ್ಲಿ ಪಾಲ್ಗೊಂಡಿದ್ದ ನಿವೃತ್ತ ಯೋದರದ ಕಾಜುರು ಗ್ರಾಮದ ಎಂ .ಸ್ ಪೊನ್ನಪ್ಪ , ಎಂ.ಎಸ್ ಕಾಳಪ್ಪ , ಅಪ್ಪಾಜಿ .ಶನಿವಾರಸಂತೆಯ ಕಳಲೇ ಗ್ರಾಮದ ಕೆ. ವಿ ಮಂಜುನಾಥ್ ಮತ್ತು ಪುಟ್ಟ ಸ್ವಾಮಿ  ಇವರನ್ನು ಸನ್ಮಾನಿಸಲಾಯಿತು.   ಸೇವಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಟಿ. ಸಿ. ಚಂದ್ರನ್ ಕಾರ್ಯಕ್ರಮದ ಬೌದ್ಧಿಕ್  ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಭಾಸ್ ತಿಮ್ಮಯ್ಯ, ಸಹ ಸಂಪರ್ಕ ಪ್ರಮುಖ್ ಎಂ. ಬಿ. ಉಮೇಶ್,  ತಾಲೂಕು ಅಧ್ಯಕ್ಷ ಸುನಿಲ್, ಉಪಾಧ್ಯಕ್ಷರಾದ ಸಂದೀಪ್, ಪ್ರಧಾನ ಕಾರ್ಯದರ್ಶಿ ಬೊಜೇಗೌಡ, ಕಾರ್ಯದರ್ಶಿ ಲೋಕೇಶ್, ಹಿಂದು ಯುವ ವಾಹಿನಿ ಜಿಲ್ಲಾ ಪ್ರಮುಖ್ ಚೇತನ್, ವಲಯ  ಪ್ರಮುಖರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು