7:32 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ಸ್ಪರ್ಧೆ: ಬಾಲ ಪ್ರತಿಭೆ ಅವನಿ ಹಾಗೂ ಭೂಮಿಕಾ ಶೆಟ್ಟಿ ಮೇ ತಿಂಗಳ ಟಾಪರ್

02/06/2021, 06:58

ಮಂಗಳೂರು(reporterkarnataka news); ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಬಾಲಪ್ರತಿಭೆ ಅವನಿ ಮೋಹನ್ ಹಾಗೂ ಭೂಮಿಕಾ ಆರ್. ಶೆಟ್ಟಿ ಆಯ್ಕೆಗೊಂಡಿದ್ದಾರೆ.

ಅವನಿ ಮೋಹನ್ ಮಡಿಕೇರಿಯವರು. ಮೋಹನ್ ಹಾಗೂ ವೀಣಾ ಅವರ ಪುತ್ರಿ. ನಟನೆ, ಗಾಯನ, ನೃತ್ಯ, ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿರುವ ಅವನಿ ತನ್ನದೇ ಶೈಲಿಯ ನಟನೆ ಮೂಲಕ ಜನಮೆಚ್ಚುಗೆ ಪಡೆದಿದ್ದಾರೆ. ಬಹುಮುಖ ಪ್ರತಿಭೆ ಈ ಬಾಲ ಕಲಾವಿದೆ.

ಭೂಮಿಕಾ ಶೆಟ್ಟಿ ಅವರು ಸುಳ್ಯದ ಕೆವಿಜಿ ಡೆಂಡಲ್ ಕಾಲೇಜಿನಲ್ಲಿ  ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿ. ತಂದೆ ಸರಕಾರಿ ಉದ್ಯೋಗಿ ರವೀಂದ್ರನಾಥ ಶೆಟ್ಟಿ ಹಾಗೂ ತಾಯಿ ಉಜ್ವಲಾ ಆರ್. ಶೆಟ್ಟಿ. ಕಾಸರಗೋಡಿ ನಸಸಿಹಿತ್ಲು-ಶಿವ ಭೂಮಿ ನೆಟ್ಟಣಿಗೆಯಲ್ಲಿ ವಾಸವಾಗಿದ್ದಾರೆ.

ಕಲಿಕೆಯಲ್ಲಿ ಬಹಳಷ್ಟು ಮುಂದಿರುವ ಭೂಮಿಕಾ ಅವರು 10ನೇ  ತರಗತಿಯಲ್ಲಿ ಎಲ್ಲಾ ವಿಷಯಗಳಲ್ಲಿ A+ ಪಡೆದು ಶೇ. 97 ಅಂಕ ಪಡೆದಿದ್ದರು. ಹಾಗೆ ಪಿಯುಸಿಯಲ್ಲಿ ಪಿಸಿಎಂಬಿಯಲ್ಲಿ ಶೇ. 92 ಅಂಕ ಗಳಿಸಿದ್ದರು. ಕೋಳಿಕ್ಕಜೆ ಬಾಲಸುಬ್ರಹ್ಮಣ್ಯಂ ಭಟ್ ಅವರಿಂದ ಸಂಗೀತ ಅಭ್ಯಾಸ. ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಅವರಿಂದ ಭರತನಾಟ್ಯ ಕಲಿತರು. ಭರತನಾಟ್ಯ ಸೀನಿಯರ್ ಗ್ರೇಡ್ ನಲ್ಲಿ ಶೇ. 80 ಅಂಕ ಪಡೆದಿದ್ದರು. ಭರತನಾಟ್ಯದಲ್ಲಿ ಇದುವರೆಗೆ 230ಕ್ಕೂ ಅಧಿಕ ಕಾಯ೯ಕ್ರಮಗಳನ್ನು ನೀಡಿದ್ದಾರೆ.

ಸಂಗೀತ, ಭರತನಾಟ್ಯ ಜತೆಗೆ ಚಿತ್ರಕಲೆಯ ಹವ್ಯಾಸವೂ ಇವರಿಗಿದೆ. ಸತತವಾಗಿ 5ವಷ೯ ಜಿಲ್ಲಾ ಮಟ್ಟದಲ್ಲಿ ಕನ್ನಡ, ಇಂಗ್ಲಿಷ್, ಸಂಸ್ಕೃತ ಕಂಠಪಾಠ ದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಭರತನಾಟ್ಯ ದಲ್ಲಿ ಜಿಲ್ಲಾಮಟ್ಟದಲ್ಲಿ ಬಹುಮಾನ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು