9:10 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಎಲ್‍ಎಲ್‍ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ

20/12/2021, 11:49

ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ.  

ಐದು ವರ್ಷಗಳ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಕೆ.ಪಿ. ಪ್ರಭುದೇವ್ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠದಲ್ಲಿ ನಡೆಯಲಿದೆ. 

ಸಾಕಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಿಲ್ಲ. ತರಗತಿ ಆಲಿಸಲು ಲ್ಯಾಪ್‍ಟಾಪ್, ಡೆಸ್ಕ್‍ಟಾಪ್ ಮತ್ತು ಇಂಟರ್‍ನೆಟ್ ಸೇರಿ ಇತರೆ ಅಗತ್ಯ ಸೌಲಭ್ಯಗಳಿರಲಿಲ್ಲ. ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾದ ಶಿಕ್ಷಣ ದೊರೆತಿಲ್ಲ. ಇದೇ ಕಾರಣಕ್ಕೆ ಮೂರು ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಧಾರವಾಡ ಹೈಕೋರ್ಟ್ ಪೀಠ ಡಿ.14ರಂದು ರದ್ದುಪಡಿಸಿದೆ.

ಇದೇ ರೀತಿ 5 ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆಯನ್ನು ಕೂಡ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು