9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎಲ್‍ಎಲ್‍ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ

20/12/2021, 11:49

ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ.  

ಐದು ವರ್ಷಗಳ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಕೆ.ಪಿ. ಪ್ರಭುದೇವ್ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠದಲ್ಲಿ ನಡೆಯಲಿದೆ. 

ಸಾಕಷ್ಟು ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಿಲ್ಲ. ತರಗತಿ ಆಲಿಸಲು ಲ್ಯಾಪ್‍ಟಾಪ್, ಡೆಸ್ಕ್‍ಟಾಪ್ ಮತ್ತು ಇಂಟರ್‍ನೆಟ್ ಸೇರಿ ಇತರೆ ಅಗತ್ಯ ಸೌಲಭ್ಯಗಳಿರಲಿಲ್ಲ. ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾದ ಶಿಕ್ಷಣ ದೊರೆತಿಲ್ಲ. ಇದೇ ಕಾರಣಕ್ಕೆ ಮೂರು ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಧಾರವಾಡ ಹೈಕೋರ್ಟ್ ಪೀಠ ಡಿ.14ರಂದು ರದ್ದುಪಡಿಸಿದೆ.

ಇದೇ ರೀತಿ 5 ವರ್ಷದ ಕಾನೂನು ಪದವಿಯ 2ನೆ ಮತ್ತು 4ನೆ ಸೆಮಿಸ್ಟರ್ ಪರೀಕ್ಷೆಯನ್ನು ಕೂಡ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು