8:29 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ?: 6 ತಿಂಗಳಲ್ಲೇ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುವರೇ?

20/12/2021, 15:16

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಷಯ ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಅಧಿಕಾರ ಶಾಶ್ವತವಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾನುವಾರ ಲಿಂಗಾಯತ ಪಂಚಮಸಾಲಿ ಸಮುದಾಯ ಭವನದ ಕಾಮಗಾರಿಗೆ ಅಡಿಗಲ್ಲು ಮತ್ತು ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ತೀವ್ರ ಭಾವಜೀವಿಯಾದ ಸಿಎಂ ಅವರುಅಧಿಕಾರದ ಎಲ್ಲಾ ಸ್ಥಾನಗಳು ತಾತ್ಕಾಲಿಕ, ಯಾವುದು ಶಾಶ್ವತವಲ್ಲ.ಈ ಜೀವನ ಶಾಶ್ವತವಲ್ಲ, ನಾವು ಎಷ್ಟು ದಿನ ಬದುಕುತ್ತೇವೆ ಎಂಬುದು ನಮಗೆ ತಿಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರದ ಎಲ್ಲಾ ಹುದ್ದೆಗಳೂ ಶಾಶ್ವತವಲ್ಲ. ಈ ಬಗ್ಗೆ ನಾವು ನಿರಂತರವಾಗಿ ಜಾಗೃತರಾಗಿರಬೇಕು ಎಂದು ಹೇಳಿದರು.

ಕ್ಷೇತ್ರದ ಹೊರಗಡೆ ಮಾತ್ರ ನಾನು ಸಿಎಂ, ಇಲ್ಲಿ ಬಂದಾಗ ಕೇವಲ ಬಸವರಾಜ ಬೊಮ್ಮಾಯಿ. 

ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರದಿಂದಲೇ ನಾನು ರಾಜ್ಯದ ಸಿಎಂ ಆಗಿದ್ದೇನೆ. ನಾನು ಯಾವಾಗಲೂ ಹೇಳುವ ಒಂದು ವಿಷಯವೆಂದರೆ, ನಾನು ಈ ಕ್ಷೇತ್ರದಿಂದ ಹೊರಗಿರುವಾಗ ನಾನು ಗೃಹ ಸಚಿವ, ಜಲಸಂಪನ್ಮೂಲ ಸಚಿವನಾಗಿರಬಹುದು. ಆದರೆ, ನಾನು ಇಲ್ಲಿಗೆ ಹಿಂತಿರುಗಿದಾಗಲೆಲ್ಲಾ ನಾನು ಬಸವರಾಜ ಬೊಮ್ಮಾಯಿ ಮಾತ್ರ ಎಂದರು.

“ನಿಮ್ಮ ಮನೆಗೆ ಬಂದಾಗ ನೀವು ನನಗೆ ರೊಟ್ಟಿ ತಿನ್ನಿಸಿದ್ದೀರಿ, ಅದನ್ನು ಎಂದಿಗೂ ಮರೆಯುವುದಿಲ್ಲ. ನಾನು ಯಾವುದೇ ಕೆಲಸ ಮಾಡಿದರೂ ನಿಮಗೆ ಸದಾ ಋಣಿಯಾಗಿರುತ್ತೇನೆ. ನನಗೆ ಯಾವುದೇ ದೊಡ್ಡ ಆಸೆಗಳಿಲ್ಲ. ಆದರೆ ನನ್ನ ಕ್ಷೇತ್ರದ ಜನರ ಪ್ರೀತಿಗೆ ಸದಾ ಪಾತ್ರನಾಗಬೇಕು ಎಂದು ಬಯಸುತ್ತೇನೆ” ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಜನತಾದಳ ಸರಕಾರ ಪತನಗೊಂಡ ಬಳಿಕ ಯಡಿಯೂರಪ್ಪ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂತು. ನಂತರ ಹೈಕಮಾಂಡ್ ಸೂಚನೆ ಮೇರೆಗೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಸವರಾಜ ಬೊಮ್ಮಾಯಿ ಈ ವರ್ಷದ ಜುಲೈನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇನ್ನು ಸುಮಾರು 16 ತಿಂಗಳಲ್ಲಿ ಪ್ರಸಕ್ತ ವಿಧಾನಸಭೆಯ ಅವಧಿ ಮುಗಿದು ಚುನಾವಣೆ ನಡೆಯಲಿದೆ. ಅಷ್ಟರಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯಾಗಲಿದೆ ಎನ್ನಲಾಗಿದೆ. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷರೂ ಬದಲಾಗಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು