2:02 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಬಂಟವಾಳ ಕಾಶೀ ಮಠದ ವೃನ್ದಾವನಕ್ಕೆ ನವೀಕೃತ ಗೋಪುರ ಹಾಗೂ ಶಿಖರ ಕಲಶ ಪ್ರತಿಷ್ಠಾಪನೆ

21/12/2021, 10:49

ಚಿತ್ರ : ಮಂಜು ನೀರೇಶ್ವಾಲ್ಯ                         ಮಂಗಳೂರು(reporterkarnataka.com) : ಬಂಟ್ವಾಳ ಶ್ರೀ ಕಾಶೀಮಠದಲ್ಲಿರುವ  ಶ್ರೀ ಕಾಶೀ ಮಠ ಸಂಸ್ಥಾನದ 6ನೇ ಯತಿವರ್ಯರಾದ ಮಹಾ ತಪಸ್ವಿ ಶ್ರೀಮದ್ ದೇವೇಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನದ ನವೀಕೃತ ಶಿಖರ ಕಲಶ ಹಾಗೂ ನೂತನ ಗೋಪುರದ ಪುನಃ ಪ್ರತಿಷ್ಠಾಪನೆ ಯು ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಆದಿತ್ಯವಾರ ನೆರವೇರಿತು . 

ನವೀಕೃತ ಶಿಖರ ಕಲಶ ಹಾಗೂ ನೂತನ ಗೋಪುರದ ಪುನಃ ಪ್ರತಿಷ್ಠಾಪನೆ ಪ್ರಯುಕ್ತ ಶಾಖಾ ಮಠದಲ್ಲಿ 10 ದಿನಗಳ ಪರ್ಯಂತ 108 ನಾರೀಕೇಳ ಗಣಹೋಮ , ಶ್ರೀ ಭಾಗವತ ಸಪ್ತಾಹ , ಶ್ರೀ ಸುದರ್ಶನ ಹವನ , ಶ್ರೀ ಭೂ ವರಾಹ ಹವನ , ಶ್ರೀ ನರಸಿಂಹ ಹವನ , ಶ್ರೀ ವಾಯುಸ್ತುತಿ ಹವನ , ಶ್ರೀ ಲಕ್ಷ್ಮೀನಾರಾಯಣ ಹೃದಯ ಹವನ , ದುರ್ಗಾ ನಮಸ್ಕಾರ , ಚಂಡಿಕಾ ಹವನ , ದಶಮ ಸ್ಕಂದ ಹವನ , ಸುಂದರಕಾಂಡ ಹವನಗಳು ಶ್ರೀಗಳವರ ಮಾರ್ಗದರ್ಶನದಲ್ಲಿ ನೆರವೇರಿದವು , ಪುನಃ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿಖರ ಕಲಶ ಅಧಿವಾಸ ಕಾರ್ಯಕ್ರಮಗಳು ವೈದಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನಡೆದವು . 

ಆದಿತ್ಯವಾರ 10:46 ರ ಕುಂಭ ಲಗ್ನ ಮುಹೂರ್ತದಲ್ಲಿ ಪುನಃ ಪ್ರತಿಷ್ಠಾ ಕಾರ್ಯಕ್ರಮ ಶ್ರೀಗಳವರ ಅಮೃತ ಹಸ್ತಗಳಿಂದ ನಡೆಯಿತು ಬಳಿಕ ರಾತ್ರಿ ಶ್ರೀ ಮಾಧವೇಂದ್ರ ಸಭಾ ಸದನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು . ಶ್ರೀಗಳವರಿಂದ ದಾನಿಗಳಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು ಬಳಿಕ ಶ್ರೀಗಳವರ ಆಶೀರ್ವಚನ ನೆರವೇರಿತು . ಈ ಸಂದರ್ಭದಲ್ಲಿ ಶಾಖಾ ಮಠದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಭಾಮಿ ನಾರಾಯಣ್ ಶೆಣೈ , ವೆಂಕಟ್ರಾಯ ಪೈ ,  ಜೆ . ಪುರುಷೋತ್ತಮ್  ಪೈ , ಬಿ . ಶಿವರಾಯ ಪ್ರಭು , ಬಿ . ಗಣೇಶ್ ಮಲ್ಯ , ಬಿ . ಮಹೇಶ್ ಬಾಳಿಗಾ , ಬಿ . ರಿತೇಶ್ ಬಾಳಿಗಾ , ಬಿ ವಿಜಯಾನಂದ ಶೆಣೈ . ತಿರುಮಲ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾದ ಬಿ . ಪುರುಷೋತ್ತಮ್   ಶೆಣೈ , ಏ . ಗೋವಿಂದ ಪ್ರಭು , ಪಿ . ಪ್ರವೀಣ್ ಕಿಣಿ , ಸೂರ್ಯನಾರಾಯಣ ಬಾಳಿಗಾ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು