8:04 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ ವಿಫಲಗೊಳಿಸಲು  ಷಡ್ಯಂತ್ರ ನಡೆಯುತ್ತಿದೆ: ಚಿಕ್ಕಮಗಳೂರಿನಲ್ಲಿ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  

22/12/2021, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಬೆಳಗಾವಿಯಲ್ಲಿ ಎಂಇಎಸ್ ಜತೆ ಕಾಂಗ್ರೆಸ್ ಸೇರಿರೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನ ವಿಫಲಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಕರ್ನಾಟಕದಲ್ಲಿ ಕನ್ನಡಿಗರ-ಮರಾಠಿ ಬೇಧಭಾವವಿಲ್ಲ, ಯೋಜನೆಗಳನ್ನ ಇಬ್ಬರಿಗೂ ನೀಡಿದ್ದೇವೆ. ಜಾತಿ-ಧರ್ಮ ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರನ್ನ ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ.ಅನಾವಶ್ಯಕವಾಗಿ ರಾಜಕೀಯ ಗಲಭೆ ಎಬ್ಬಿಸುತ್ತಿರುವವರ ಬಗ್ಗೆ ಎಚ್ಚರಗೊಳ್ಳಬೇಕಿದೆ. 

ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಅವರು ಆಪಾದಿಸಿದರು.

ಮಹಾರಾಷ್ಟ್ರ ಸಿಎಂ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದವರ ಜೊತೆ ಚೆನ್ನಾಗಿರಬೇಕು. ನೀವು ಮಹಾರಾಷ್ಟ್ರಕ್ಕೆ ಹೋಗಕ್ಕಾಗಲ್ಲ, ನಾವು ಕಳಿಸಿಲ್ಲ ಎಲ್ಲರೂ ಅಣ್ಣ-ತಮ್ಮಣ್ಣಂದಿರಂತೆ ಬದುಕಬೇಕೆಂದು ಮನವಿ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು