4:05 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು: ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ 

24/12/2021, 09:23

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ , ಬ್ಯಾಂಕ್ ರೈತರಿಗೆ ಕೇವಲ ಶೇ .೩ ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ . ರೈತರಿಗೆ ಕೃಷಿ ಅಭಿವೃದ್ಧಿಗಾಗಿ ತಲಾ ರೂ .೧೦ ಲಕ್ಷದ ವರೆಗೆ ಸಾಲ ನೀಡಲಾಗುವುದು . ಸಾಲ ವಸೂಲಾತಿ ಪ್ರಮಾಣ ಶೇ .೭೮ ರಷ್ಟಿದೆ ಎಂದು ಹೇಳಿದರು . ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ ಮಾತನಾಡಿ , ಖಾಸಗಿ ಬ್ಯಾಂಕ್‌ಗಳು ಅಧಿಕ ಬಡ್ಡಿ ವಿಧಿಸಿ ಸಾಲ ನೀಡುತ್ತವೆ . ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆಯುವುದು ಸುಲಭದ ಮಾತಲ್ಲ . ಇಂಥ ಪರಿಸ್ಥಿತಿಯಲ್ಲಿ ಪಿಎಲ್‌ಡಿ ಬ್ಯಾಂಕ್ ರೈತ ಸ್ನೇಹಿಯಾಗಿ ಆರ್ಥಿಕ ನೆರವು . ನೀಡುತ್ತಿದೆ . ಅದನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರ ಬಳಸಬೇಕು . ಬ್ಯಾಂಕ್ ಅಭಿವೃದ್ಧಿ ದೃಷ್ಟಿಯಿಂದ ಸಾಲ ಮರುಪಾವತಿ ಅತ್ಯಗತ್ಯ ಎಂದು ಹೇಳಿದರು . ಈ ಸಂದರ್ಭದಲ್ಲಿ ಪಸಕ್ತ ವರ್ಷದಲ್ಲಿ ಬ್ಯಾಂಕ್ ನಿರ್ವಹಣೆಗೆ ರೂ .೫೫.೪೫ ಲಕ್ಷ ಖರ್ಚು ಮಾಡಲು ಸಭೆ ಅನುಮೋದನೆ ನೀಡಿತು . ನಿರ್ದೇಶಕರಾದ ಟಿ.ವಿ.ಕೃಷ್ಣಾರೆಡ್ಡಿ , ರಾಮಚಂದ್ರಾರೆಡ್ಡಿ , ಶ್ರೀಕಂಠರೆಡ್ಡಿ , ಜಗದೀಶ್ ಕುಮಾರ್ , ನಾರಾಯಣಸ್ವಾಮಿ , ಪಾಪನ್ನ , ಗಂಗಿರೆಡ್ಡಿ , ಟಿ.ಎ.ನಾರಾಯಣಸ್ವಾಮಿ , ನಾಗರಾಜ್ , ಗುರಪ ಮುಖಂಡರಾದ ಅಯ್ಯಪ್ಪ , ಸೀತಾರಾಮರೆಡ್ಡಿ , ಮೋಹನ್ ಕುಮಾರ್ , ವೆಂಕಟಸುಬಾರೆಡ್ಡಿ , ನರಸಿಂಹಪ್ಪ , ವ್ಯವಸ್ಥಾಪಕ ಸಿ.ಎನ್‌.ಈಶ್ವರ್‌ , ವಿ.ಶ್ರೀನಿವಾಸ್ , ಸತೀಶ್ , ಮಂಜುನಾಥ್ , ಕೆ.ಬಿ.ನರೇಶ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು