6:56 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಕಳಸ ಪದವಿಪೂರ್ವ ಕಾಲೇಜು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ; ಭದ್ರಾ ನದಿಯಲ್ಲಿ  ಓರ್ವನ ಮೃತದೇಹ ಪತ್ತೆ

25/12/2021, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕಳಸ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕಾಣೆಯಾಗಿದ್ದು ಇದರಲ್ಲಿ ಒಬ್ಬನ ಮೃತದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಓರ್ವನ ಮತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಮೃತದೇಹ ಪತ್ತೆಯಾದವನು ಹಿರೇಬೈಲಿನ ಜೀವನ್ ದಾಸ್(16), ಕಾಣೆಯಾದನು ಹೆಮ್ಮಕ್ಕಿ ಗ್ರಾಮದ ನಿಕ್ಷೇಪ ಎಂದು ಗುರುತಿಸಲಾಗಿದೆ.

ಕಳಸ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಇಬ್ಬರೂ ಸ್ನೇಹಿತರಾಗಿದ್ದರು.ಗುರುವಾರ ಕಾಲೇಜಿಗೆಂದು ಮನೆಯಿಂದ ಬಂದವರು ರಾತ್ರಿಯಾದರೂ ಮನೆಗೆ ಹಿಂದಿರುಗದ ಹಿನ್ನಲೆಯಲ್ಲಿ ಪೋಷಕರು ಸಾಕಷ್ಟು ಹುಡುಕಾಟ ನಡೆಸಿದ್ದರು.

ಶುಕ್ರವಾರ ಕಳಸದ ಭದ್ರಾನದಿಯ ರುದ್ರಪಾದ ಎಂಬ ಪ್ರದೇಶದಲ್ಲಿ ವಿದ್ಯಾರ್ಥಿಗಳ ಬ್ಯಾಗ್,ಯೂನಿಫಾರ್ಮ್,ಚಪ್ಪಲಿ,ಮೊಬೈಲ್ ಗಳು ಕಂಡು ಬಂದ ಹಿನ್ನಲೆಯಲ್ಲಿ ನದಿಯಲ್ಲಿ ಹುಡುಕಾಟ ನಡೆಸಿದಾಗ ಜೀವನ್ ಎಂಬುವವನ ಮೃತದೇಹ ಪತ್ತೆಯಾಗಿದೆ. ಇನ್ನೊರ್ವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು