3:42 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕಗೆ  ಪಿತೃ ವಿಯೋಗ: ಹಲವು ಗಣ್ಯರ ಸಂತಾಪ

25/12/2021, 22:35

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕ ಅವರ ತಂದೆ ಕೃಷ್ಣ ಕಲ್ಲಡ್ಕ ಅವರು ಗುರುವಾರ ನಿಧನರಾದರು.

ಕಲ್ಲಡ್ಕದಲ್ಲಿ ಕೃಷ್ಣ ಟೈಲರ್ ಎಂದೇ ಪ್ರಸಿದ್ಧರಾಗಿದ್ದ ಅವರು ಕಲ್ಲಡ್ಕ ಸಮೀಪದ ನಾಗತಿಮಾರ್ ನಲ್ಲಿ 1928ರಲ್ಲಿ ಜನಿಸಿದ್ದರು. ಬಾಲ್ಯದ ಜೀವನವನ್ನು ಮಂಗಳೂರಿನಲ್ಲಿ ಕಳೆದ ಅವರು ಕಲ್ಲಡ್ಕದಲ್ಲಿ ಟೈಲರಿಂಗ್ ವೃತ್ತಿ ಆರಂಭಿಸಿದ್ದರು. ಕಲ್ಲಡ್ಕದ ಸುತ್ತಮುತ್ತಲಿನ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಸ್ನೇಹಿತರ ಬಳಗವನ್ನೇ ಸಂಪಾದಿಸಿದ್ದರು.

ಅವರು ಪತ್ನಿ ರಾಜೀವಿ, ಪುತ್ರರಾದ ಚೆನ್ನೈನ ನಂಜಿಲ್ ಕಂಪನಿಯ ಜನರಲ್ ಮೆನೇಜರ್ ಉದಯ್ ಕಲ್ಲಡ್ಕ, ಕುಳಾಯಿಯ ರಶ್ಮಿ ಸ್ಟಿಚ್ ವೇರ್ ಮಾಲೀಕ ವಿದ್ಯಾಧರ ಕಲ್ಲಡ್ಕ, ಅಶೋಕ್ ಕಲ್ಲಡ್ಕ ಮತ್ತು ಪುತ್ರಿಯರಾದ ವಿಜಯಲಕ್ಷ್ಮೀ ಹಾಗೂ ಭಾರತಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂತಾಪ: ಕೃಷ್ಣ ಕಲ್ಲಡ್ಕ ಅವರ ನಿಧನಕ್ಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು