1:37 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸುರತ್ಕಲ್: ಬಿಹಾರ ಮೂಲದ ಎನ್ ಐಟಿಕೆ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ; ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು 

26/12/2021, 17:13

ಮಂಗಳೂರು(reporterkarnataka.com): ಎನ್ ಐಟಿಕೆ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್ (20)ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಾನುವಾರ ನಡೆದಿದೆ.

ವಿದ್ಯಾರ್ಥಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದ್ದು, ತನಗೆ ನೌಕರಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಎಜುಕೇಶನ್ ಲೋನ್ ಮಾಡಿ ಕಲಿಯುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾನೆ. 

ಬೆಳಗ್ಗೆ 8 ಗಂಟೆಯ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಸಹಪಾಠಿಗಳು ಬೆಳಗ್ಗೆ 9 ಗಂಟೆಗೆ ಬಾಗಿಲು ಬಡಿದಾಗ ಆತ ಬಾಗಿಲು ತೆರೆಯಲಿಲ್ಲ. ಮತ್ತೆ 11 ಗಂಟೆಗೆ ಕಿಟಕಿ ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.

ಬಿಹಾರದ ಪಾಟ್ನಾದ ವಿದ್ಯಾರ್ಥಿಯಾದ ಈತನ ಹೆತ್ತವರಿಗೆ ವಿಷಯ ತಿಳಿಸಲಾಗಿದ್ದು, ತಾವು ಬಡವರು ಬಿಹಾರದಿಂದ ಬರಲು ತಮ್ಮಲ್ಲಿ ದುಡ್ಡಿಲ್ಲ. ಅಲ್ಲೇ ಮೃತದೇಹದ ಅಂತ್ಯಸಂಸ್ಕಾರ ನಡೆಸಿ ಎಂದು ತಿಳಿಸಿದ್ದರು. ಆದರೆ ಎನ್ ಐಟಿಕೆ ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ವೃಂದ ಸೇರಿ ಮೃತದೇಹವನ್ನು ಪಾಟ್ನಾಕ್ಕೆ ಕೊಂಡೊಯ್ಯುವ ವ್ಯವಸ್ಥೆ ಮಾಡಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮೃತ ಸೌರವ್ ​ ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು