3:54 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಮಡಿಕೇರಿಯ ಮೇಕೇರಿಯಲ್ಲಿ ವಿಜಯ್ ದಿವಸ್:  10ನೇ ವರ್ಷದ ರಕ್ತದಾನ ಶಿಬಿರ          

26/12/2021, 20:04

ಮಡಿಕೇರಿ(reporterkarnataka.com): ಸ್ವಾಗತ ಯುವಕ ಸಂಘ ಮೇಕೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೇಕೇರಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ರಕ್ತದಾನ ಶಿಬಿರ ನಡೆಸಲಾಯಿತು. 

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷೆ ಹಾಗೂ ಮಡಿಕೇರಿ ನಗರ ಸಭೆಯ ಅಧ್ಯಕ್ಷರಾದ ಅನಿತಾ ಪೂವಯ್ಯ ನೆರವೇರಿಸಿದರು. ರಕ್ತದಾನದ ಮಹತ್ವದ ಬಗ್ಗೆ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ಕರುಂಬಯ್ಯ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಕಾಂಗೀರ ಸತೀಶ್  ಮಾತನಾಡಿ, ಈ ದೇಶ ಕಂಡ ಅಪ್ರತಿಮ ದೇಶಭಕ್ತ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಆದರ್ಶಗಳನ್ನೇ ಪ್ರೇರಣೆಯಾಗಿಯಾಗಿಸಿ ಸ್ಥಳೀಯ ಸ್ವಾಗತ ಯುವಕ ಸಂಘದ ಮೂಲಕ ನಡೆಸುತ್ತಿರುವ ರಕ್ತದಾನ ಶಿಬಿರ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಅಧ್ಯಕ್ಷತೆಯನ್ನು ಜಿಲ್ಲಾ ಯುವಕ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ , ಗೌರಿಶಂಕರ ದೇವಾಲಯದ ಟ್ರಸ್ಟಿ ಪಿ.ಎಂ. ದಾಮೋದರ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಫೀಕ್,ಮುಖ್ಯೋಪಾಧ್ಯರಾದ ಸಬೀತಾ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು,ಕಾಂಗೀರ ಕೀರ್ತನ್,ಹನೀಫ್,ಶುಭಾ ಭರತ್ ಉಪಸ್ಥಿತರಿದ್ದರು. 

ಯುವಕ ಸಂಘದ ಅಧ್ಯಕ್ಷ ಜೆ.ಹರೀಶ್ ಸ್ವಾಗತಿಸಿ.ಸದಸ್ಯ ಟಿ.ವಿ. ಲೋಕೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು