9:21 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಮಡಿಕೇರಿಯ ಮೇಕೇರಿಯಲ್ಲಿ ವಿಜಯ್ ದಿವಸ್:  10ನೇ ವರ್ಷದ ರಕ್ತದಾನ ಶಿಬಿರ          

26/12/2021, 20:04

ಮಡಿಕೇರಿ(reporterkarnataka.com): ಸ್ವಾಗತ ಯುವಕ ಸಂಘ ಮೇಕೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೇಕೇರಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ರಕ್ತದಾನ ಶಿಬಿರ ನಡೆಸಲಾಯಿತು. 

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷೆ ಹಾಗೂ ಮಡಿಕೇರಿ ನಗರ ಸಭೆಯ ಅಧ್ಯಕ್ಷರಾದ ಅನಿತಾ ಪೂವಯ್ಯ ನೆರವೇರಿಸಿದರು. ರಕ್ತದಾನದ ಮಹತ್ವದ ಬಗ್ಗೆ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ಕರುಂಬಯ್ಯ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಕಾಂಗೀರ ಸತೀಶ್  ಮಾತನಾಡಿ, ಈ ದೇಶ ಕಂಡ ಅಪ್ರತಿಮ ದೇಶಭಕ್ತ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಆದರ್ಶಗಳನ್ನೇ ಪ್ರೇರಣೆಯಾಗಿಯಾಗಿಸಿ ಸ್ಥಳೀಯ ಸ್ವಾಗತ ಯುವಕ ಸಂಘದ ಮೂಲಕ ನಡೆಸುತ್ತಿರುವ ರಕ್ತದಾನ ಶಿಬಿರ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಅಧ್ಯಕ್ಷತೆಯನ್ನು ಜಿಲ್ಲಾ ಯುವಕ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ , ಗೌರಿಶಂಕರ ದೇವಾಲಯದ ಟ್ರಸ್ಟಿ ಪಿ.ಎಂ. ದಾಮೋದರ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಫೀಕ್,ಮುಖ್ಯೋಪಾಧ್ಯರಾದ ಸಬೀತಾ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು,ಕಾಂಗೀರ ಕೀರ್ತನ್,ಹನೀಫ್,ಶುಭಾ ಭರತ್ ಉಪಸ್ಥಿತರಿದ್ದರು. 

ಯುವಕ ಸಂಘದ ಅಧ್ಯಕ್ಷ ಜೆ.ಹರೀಶ್ ಸ್ವಾಗತಿಸಿ.ಸದಸ್ಯ ಟಿ.ವಿ. ಲೋಕೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು