11:38 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಛತಾ ಕಾರ್ಯಕ್ರಮ

27/12/2021, 13:10

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ  ರಾಷ್ಟ್ರೀಯ ಸೇವಾ ಯೋಜನೆ  ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಚತಾ ಕಾರ್ಯಕ್ರಮ ಡಿ.26ರಂದು ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆಯಿತು. 


ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಸ್ವಚ್ಛತೆ ಮಾಡುವ ಮೂಲಕ ಉದ್ಘಾಟಿಸಿ,  ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ  ಮಾತನಾಡಿದ ಅವರು, ಕರಾವಳಿ ಜಿಲ್ಲೆಯ ಸೌಂದರ್ಯ, ನಮ್ಮ ಪ್ರವಾಸೋದ್ಯಮದ ಕನ್ನಡಿ ಎಂದರೆ ಅದು ನಮ್ಮ ಬೀಚ್‌ಗಳು. ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಸ್ವಚ್ಛವಾಗಿರುವುದರ ಜೊತೆಗೆ ಕಡಲ ತೀರವನ್ನು ಸ್ವಚ್ಛವಾಗಿ ಇರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು. 


ಸ್ವಚ್ಛತೆಯ ಕುರಿತ ಜಾಗೃತಿಗಾಗಿ ಇಲಾಖೆಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಕೆಲಸ‌ ಮಾಡಬೇಕಾಗಿದೆ ಎಂದವರು ಅಭಿಪ್ರಾಯಪಟ್ಟರು.


ಮುಖ್ಯ ಅತಿಥಿಯಾಗಿದ್ದ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ನಮ್ಮ ಪರಿಸರ ಮತ್ತು ಬೀಚ್‌ಗಳನ್ನು ಸ್ವಚ್ಛವಾಗಿ ಸಂರಕ್ಷಿಸಬೇಕಾದ ಜವಾಬ್ದಾರಿ ಇದೆ ಎಂದು ನುಡಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್, ನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕ್ರೆಡೈ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ ಜೈನ್,  ಕೆಐಒಸಿಎಲ್ ಜನರಲ್ ಮ್ಯಾನೇಜರ್ ರಾಮಕೃಷ್ಣ ರಾವ್  ಎಚ್, ಸೀನಿಯರ್ ಮ್ಯಾನೇಜರ್ ಮುರುಗೇಶ್, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ., ಬೈಕಂಪಾಡಿ ಮೊಗವೀರ ಮಹಾಸಭಾದ ಅಧ್ಯಕ್ಷ ವಸಂತ ಅಮೀನ್, ಯತೀಶ್ ಬೈಕಂಪಾಡಿ, ಯಂಗ್ ಸ್ಟಾರ್ ಪಣಂಬೂರು ಅಧ್ಯಕ್ಷ ನವೀನ್ ಸಾಲಿಯಾನ, ಸಂತೋಷ್ ಗುರಿಕಾರ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.



ಬಳಿಕ ಬೀಚ್ ಸ್ವಚ್ಚತಾ ಜಾಗೃತಿ ಓಟ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಸ್ವಯಂ ಸೇವಕರು ಪಾಲ್ಗೊಂಡು ಸ್ವಚ್ಛತಾ ಕಾರ್ಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು