3:22 AM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ: ಆಶ್ಲೇಷ ಪೂಜೆ ಸಲ್ಲಿಕೆ

27/12/2021, 18:24

ಸುಬ್ರಹ್ಮಣ್ಯ(reporterkarnataka.com):

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ  ಜಸ್ಟಿಸ್ ಅಬ್ದುಲ್ ನಝೀರ್  ಅವರು ಕುಟುಂಬ ಸಮೇತರಾಗಿ ಬಂದು ಆಶ್ಲೇಷ ಬಲಿ ಪೂಜೆಯನ್ನು
ಸಲ್ಲಿಸಿದರು.

ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಡಿ.26ರ ರಾತ್ರಿ 8.10ಕ್ಕೆ ವಿಮಾನದ ಮೂಲಕ ಹೈದರಾಬಾದ್‌ನಿಂದ  ಮಂಗಳೂರಿಗೆ ಆಗಮಿಸಿದ್ದರು. ನಂತರ ಅವರು ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ, ವಾಸ್ತವ್ಯ ಹೂಡಿದ್ದರು. 27ರಂದು ಕುಕ್ಕೆ ದೇಗುಲದಲ್ಲಿ ಆಶ್ಲೇಷ ಬಲಿ ಪೂಜೆ ಸಲ್ಲಿಸಿದರು.

ಡಿ.28ರ ಬೆಳಿಗ್ಗೆ 9 ಗಂಟೆಗೆ ನ್ಯಾಯಮೂರ್ತಿ ಅವರು

ಕುಕ್ಕೆ ಸುಬ್ರಮಣ್ಯದಿಂದ 10.30ಕ್ಕೆ ಪುತ್ತೂರಿಗೆ ಆಗಮಿಸಿ, 11 ಗಂಟೆಗೆ ಬಾರ್ ಅಸೋಸಿಯೇಷನ್‌ನ ಕಟ್ಟಡವನ್ನು ಉದ್ಘಾಟಿಸುವರು. ಅಲ್ಲಿನ ಕೋರ್ಟ್ ಕಟ್ಟಡದ ಎರಡನೇ ಹಂತದ ಕಟ್ಟಡ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ಕ್ವಾರ್ಟಸ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.

ಮಧ್ಯಾಹ್ನ 1.15ಕ್ಕೆ ಪುತ್ತೂರಿನಿಂದ ಹೊರಟು 2.15ಕ್ಕೆ ಸುಳ್ಯಕ್ಕೆ ಆಗಮಿಸುವರು. ಮಧ್ಯಾಹ್ನ 2.30ಕ್ಕೆ ಅಲ್ಲಿ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಸಂಜೆ 4.45ಕ್ಕೆ ಬೆಳ್ತಂಗಡಿಗೆ ಆಗಮಿಸುವ ಅವರು ಅಲ್ಲಿ 5 ಗಂಟೆಗೆ ಬಾರ್ ಅಸೋಸಿಯೇಷನ್ ಕಟ್ಟಡವನ್ನು ಉದ್ಘಾಟಿಸುವರು. ಸಂಜೆ 6 ಗಂಟೆಗೆ ಬೆಳ್ತಂಗಡಿಯಿಂದ ನಿರ್ಗಮಿಸಿ ರಾತ್ರಿ 7.30ಕ್ಕೆ ಮೂಡುಬಿದ್ರಿಗೆ ಆಗಮಿಸಿ ಅವರು ಸ್ವಗೃಹದಲ್ಲಿ ವಾಸ್ತವ್ಯ ಮಾಡುವರು. 
ಡಿ.29ರ ಬುಧವಾರ ಬೆಳಿಗ್ಗೆ 8 ಗಂಟೆಗೆ ಮೂಡಬಿದ್ರೆಯಿಂದ ನಿರ್ಗಮಿಸಿ 8.45ಕ್ಕೆ ಮಂಗಳೂರಿಗೆ ಆಗಮಿಸುವ ಅವರು ಬೆಳಿಗ್ಗೆ 9ಕ್ಕೆ ನ್ಯಾಯಾಂಗ ಇಲಾಖೆ ಅಧಿಕಾರಿಗಳ ಕ್ವಾರ್ಟಸ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು. 11ಕ್ಕೆ ಬಂಟ್ವಾಳಕ್ಕೆ ಆಗಮಿಸುವ ಅವರು 11.15ಕ್ಕೆ ಬಂಟ್ವಾಳದಲ್ಲಿ ನ್ಯಾಯಾಂಗ ಇಲಾಖೆ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಅಲ್ಲಿಂದ ಅವರು 1.45ಕ್ಕೆ ಮೂಡಬಿದ್ರಿಗೆ ಆಗಮಿಸಿ ಅವರ ಸ್ವಗೃಹದಲ್ಲಿ ವಾಸ್ತವ್ಯ ಮಾಡುವರು. 
ಡಿ.30ರ ಗುರುವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮೂಡಬಿದ್ರಿಯ ಆಳ್ವಾಸ್ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. 
2022ರ ಜನವರಿ 1ರ ಬೆಳಿಗ್ಗೆ 11.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು. 

ಇತ್ತೀಚಿನ ಸುದ್ದಿ

ಜಾಹೀರಾತು