7:53 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮನೆಯಂಗಳದಲ್ಲಿ ಪುನೀತ್ ರಾಜ್ ಕುಮಾರ್  ಪುತ್ಥಳಿ ನಿರ್ಮಾಣ: ಅಭಿಮಾನ ಮೆರೆದ ಅಭಿಮಾನಿ!

28/12/2021, 13:31

ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯ ನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ

ಮಲ್ಲಮ್ಮ ನವರು ತಮ್ಮ ಮನೆಯಂಗಳದಲ್ಲಿ ಪುನೀತ್ ರಾಜಕುಮಾರ್ ರವರ ಪುತ್ಥಳಿ ಪ್ರತಿಷ್ಠಾಪಿಸಿ ಅಭಿಮಾನ ಮೆರೆದಿದ್ದಾರೆ.

ಪುನೀತ್ ರಾಜಕುಮಾರ್ ಅವರ ನೂತನ ಪುತ್ಥಳಿಯನ್ನು ಮಾಜಿ ಶಾಸಕ ಕೆ.ವಿ.ರವೀಂದ್ರನಾಥ  ಬಾಬು ಹಾಗೂ ಕೆಪಿಸಿಸಿ ಸದಸ್ಯ ಲೋಕೇಶ್ ವಿ ನಾಯಕ ನೇತೃತ್ವದಲ್ಲಿ ಅನಾವರಣ ಗೊಳಿಸಲಾಯಿತು. ಸಮಾಜ ಸೇವಕ ಆರ್.ಟಿ.ನಾಗರಾಜ ಅವರು ಮಾತನಾಡಿ, ಪುನೀತ್ ರಾಜಕುಮಾರ ಅದ್ಬುತ ನಟರಾಗಿದ್ದಾರೆ ಜೊತೆಗೆ ವೈಶಿಷ್ಟಪೂರ್ಣ ಸಮಾಜ ಸೇವಕ ಕೂಡ ಆಗಿದ್ದರು.

ಅವರು ಇಡೀ ಯುವ ಪೀಳಿಗೆಗೆ ಮಾದರಿ ಯುವರಾಜರಾಗಿದ್ದಾರೆ. ಈ ಮೂಲಕ ಅವರು ಸದಾ ಜನಮಾನಸದಲ್ಲಿರುತ್ತಾರೆ. ಅವರು ಇಹಲೋಕ  ಅಗಲಿರಬಹುದು ಆದ್ರೆ ಆವರು ತಮ್ಮ ಸೇವಾ ಕುರುಹುಗಳ ಮೂಲಕ ಅಮರರಾಗಿದ್ದಾರೆ ಎಂದರು. ಪುನೀತ್ ರು ಬಾಲ ನಟನಿದ್ದಾಗಲಿಂದಲೂ ತಾವು ಅವರ ಅಭಿಮಾನಿಯಾಗಿದ್ದು, ಆಗಿನಿಂದ ಈ ವರೆಗೆ ಪುನೀತ್ ರಾಜ್  ಅಭಿನಯಿಸಿರುವ ಪ್ರತಿ ಚನಚಿತ್ರಗಳನ್ನು,ಕುಟುಂಬ ಸದಸ್ಯರೊಡಗೂಡಿ  ವೀಕ್ಷಿಸಿದ್ದೇನೆ. ಪುನೀತ್ ರಂತೆ ತಾವೂ ಕೂಡ ತಮ್ಮ ಶಕ್ತಿ ಅನುಸಾರ  ಸಮಾಜ ಸೇವೆ ಮಾಡುವ ಇಂಗಿತವನ್ನು ನಾಗರಾಜ್ ವ್ಯಕ್ತಪಡಿಸಿದ್ದಾರೆ. 

ವೈದ್ಯ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ  ಸೋಮಶೇಖರ್, ಆರ್.ವಿ. ತಿಪ್ಪೇಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಗ್ರಾಮದ ಹಿರಿಯರು ಹಾಗೂ ನೂರಾರು ಯುವಕರು,ನೂರಾರು ಪುನೀತ್ ರಾಜಕುಮಾರ್ ಅಭಿಮಾನಿಗಳು  ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು