4:17 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮನೆಯಂಗಳದಲ್ಲಿ ಪುನೀತ್ ರಾಜ್ ಕುಮಾರ್  ಪುತ್ಥಳಿ ನಿರ್ಮಾಣ: ಅಭಿಮಾನ ಮೆರೆದ ಅಭಿಮಾನಿ!

28/12/2021, 13:31

ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯ ನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ

ಮಲ್ಲಮ್ಮ ನವರು ತಮ್ಮ ಮನೆಯಂಗಳದಲ್ಲಿ ಪುನೀತ್ ರಾಜಕುಮಾರ್ ರವರ ಪುತ್ಥಳಿ ಪ್ರತಿಷ್ಠಾಪಿಸಿ ಅಭಿಮಾನ ಮೆರೆದಿದ್ದಾರೆ.

ಪುನೀತ್ ರಾಜಕುಮಾರ್ ಅವರ ನೂತನ ಪುತ್ಥಳಿಯನ್ನು ಮಾಜಿ ಶಾಸಕ ಕೆ.ವಿ.ರವೀಂದ್ರನಾಥ  ಬಾಬು ಹಾಗೂ ಕೆಪಿಸಿಸಿ ಸದಸ್ಯ ಲೋಕೇಶ್ ವಿ ನಾಯಕ ನೇತೃತ್ವದಲ್ಲಿ ಅನಾವರಣ ಗೊಳಿಸಲಾಯಿತು. ಸಮಾಜ ಸೇವಕ ಆರ್.ಟಿ.ನಾಗರಾಜ ಅವರು ಮಾತನಾಡಿ, ಪುನೀತ್ ರಾಜಕುಮಾರ ಅದ್ಬುತ ನಟರಾಗಿದ್ದಾರೆ ಜೊತೆಗೆ ವೈಶಿಷ್ಟಪೂರ್ಣ ಸಮಾಜ ಸೇವಕ ಕೂಡ ಆಗಿದ್ದರು.

ಅವರು ಇಡೀ ಯುವ ಪೀಳಿಗೆಗೆ ಮಾದರಿ ಯುವರಾಜರಾಗಿದ್ದಾರೆ. ಈ ಮೂಲಕ ಅವರು ಸದಾ ಜನಮಾನಸದಲ್ಲಿರುತ್ತಾರೆ. ಅವರು ಇಹಲೋಕ  ಅಗಲಿರಬಹುದು ಆದ್ರೆ ಆವರು ತಮ್ಮ ಸೇವಾ ಕುರುಹುಗಳ ಮೂಲಕ ಅಮರರಾಗಿದ್ದಾರೆ ಎಂದರು. ಪುನೀತ್ ರು ಬಾಲ ನಟನಿದ್ದಾಗಲಿಂದಲೂ ತಾವು ಅವರ ಅಭಿಮಾನಿಯಾಗಿದ್ದು, ಆಗಿನಿಂದ ಈ ವರೆಗೆ ಪುನೀತ್ ರಾಜ್  ಅಭಿನಯಿಸಿರುವ ಪ್ರತಿ ಚನಚಿತ್ರಗಳನ್ನು,ಕುಟುಂಬ ಸದಸ್ಯರೊಡಗೂಡಿ  ವೀಕ್ಷಿಸಿದ್ದೇನೆ. ಪುನೀತ್ ರಂತೆ ತಾವೂ ಕೂಡ ತಮ್ಮ ಶಕ್ತಿ ಅನುಸಾರ  ಸಮಾಜ ಸೇವೆ ಮಾಡುವ ಇಂಗಿತವನ್ನು ನಾಗರಾಜ್ ವ್ಯಕ್ತಪಡಿಸಿದ್ದಾರೆ. 

ವೈದ್ಯ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ  ಸೋಮಶೇಖರ್, ಆರ್.ವಿ. ತಿಪ್ಪೇಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಗ್ರಾಮದ ಹಿರಿಯರು ಹಾಗೂ ನೂರಾರು ಯುವಕರು,ನೂರಾರು ಪುನೀತ್ ರಾಜಕುಮಾರ್ ಅಭಿಮಾನಿಗಳು  ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು