2:43 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮನೆಯಂಗಳದಲ್ಲಿ ಪುನೀತ್ ರಾಜ್ ಕುಮಾರ್  ಪುತ್ಥಳಿ ನಿರ್ಮಾಣ: ಅಭಿಮಾನ ಮೆರೆದ ಅಭಿಮಾನಿ!

28/12/2021, 13:31

ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯ ನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ

ಮಲ್ಲಮ್ಮ ನವರು ತಮ್ಮ ಮನೆಯಂಗಳದಲ್ಲಿ ಪುನೀತ್ ರಾಜಕುಮಾರ್ ರವರ ಪುತ್ಥಳಿ ಪ್ರತಿಷ್ಠಾಪಿಸಿ ಅಭಿಮಾನ ಮೆರೆದಿದ್ದಾರೆ.

ಪುನೀತ್ ರಾಜಕುಮಾರ್ ಅವರ ನೂತನ ಪುತ್ಥಳಿಯನ್ನು ಮಾಜಿ ಶಾಸಕ ಕೆ.ವಿ.ರವೀಂದ್ರನಾಥ  ಬಾಬು ಹಾಗೂ ಕೆಪಿಸಿಸಿ ಸದಸ್ಯ ಲೋಕೇಶ್ ವಿ ನಾಯಕ ನೇತೃತ್ವದಲ್ಲಿ ಅನಾವರಣ ಗೊಳಿಸಲಾಯಿತು. ಸಮಾಜ ಸೇವಕ ಆರ್.ಟಿ.ನಾಗರಾಜ ಅವರು ಮಾತನಾಡಿ, ಪುನೀತ್ ರಾಜಕುಮಾರ ಅದ್ಬುತ ನಟರಾಗಿದ್ದಾರೆ ಜೊತೆಗೆ ವೈಶಿಷ್ಟಪೂರ್ಣ ಸಮಾಜ ಸೇವಕ ಕೂಡ ಆಗಿದ್ದರು.

ಅವರು ಇಡೀ ಯುವ ಪೀಳಿಗೆಗೆ ಮಾದರಿ ಯುವರಾಜರಾಗಿದ್ದಾರೆ. ಈ ಮೂಲಕ ಅವರು ಸದಾ ಜನಮಾನಸದಲ್ಲಿರುತ್ತಾರೆ. ಅವರು ಇಹಲೋಕ  ಅಗಲಿರಬಹುದು ಆದ್ರೆ ಆವರು ತಮ್ಮ ಸೇವಾ ಕುರುಹುಗಳ ಮೂಲಕ ಅಮರರಾಗಿದ್ದಾರೆ ಎಂದರು. ಪುನೀತ್ ರು ಬಾಲ ನಟನಿದ್ದಾಗಲಿಂದಲೂ ತಾವು ಅವರ ಅಭಿಮಾನಿಯಾಗಿದ್ದು, ಆಗಿನಿಂದ ಈ ವರೆಗೆ ಪುನೀತ್ ರಾಜ್  ಅಭಿನಯಿಸಿರುವ ಪ್ರತಿ ಚನಚಿತ್ರಗಳನ್ನು,ಕುಟುಂಬ ಸದಸ್ಯರೊಡಗೂಡಿ  ವೀಕ್ಷಿಸಿದ್ದೇನೆ. ಪುನೀತ್ ರಂತೆ ತಾವೂ ಕೂಡ ತಮ್ಮ ಶಕ್ತಿ ಅನುಸಾರ  ಸಮಾಜ ಸೇವೆ ಮಾಡುವ ಇಂಗಿತವನ್ನು ನಾಗರಾಜ್ ವ್ಯಕ್ತಪಡಿಸಿದ್ದಾರೆ. 

ವೈದ್ಯ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ  ಸೋಮಶೇಖರ್, ಆರ್.ವಿ. ತಿಪ್ಪೇಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಗ್ರಾಮದ ಹಿರಿಯರು ಹಾಗೂ ನೂರಾರು ಯುವಕರು,ನೂರಾರು ಪುನೀತ್ ರಾಜಕುಮಾರ್ ಅಭಿಮಾನಿಗಳು  ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು