5:23 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

28/12/2021, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು ಕೃತಿಯ ಬಗ್ಗೆ ಮಾತನಾಡಿದರು.

ತೇಜಸ್ವಿ ಅವರು ಪ್ರತಿಯೊಂದು ಪಕ್ಷಿಯ ಬಗ್ಗೆ ವೈಜ್ಞಾನಿಕ ವಿವರಗಳನ್ನು ಕೊಡುವುದರ ಜೊತೆಗೆ ಕಥೆಗಳ ಮೂಲಕ ಪಕ್ಷಿ ಜಗತ್ತಿನ ಕುರಿತು ಕುತೂಹಲವನ್ನು ಈ ಕೃತಿಯಲ್ಲಿ ಮೂಡಿಸಿದ್ದಾರೆ. ಇದು ಈ ಕೃತಿಯ ವಿಶೇಷತೆ. ಪಕ್ಷಿಗಳ ಬಗ್ಗೆ ಆರಂಭಿಕ ಹಂತದಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳಲು ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ ಎಂದರು.

ಪಕ್ಷಿಗಳು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಿದವರು ತೇಜಸ್ವಿ. ತೇಜಸ್ವಿ ಅವರು, ಆತ್ಮಗಳಿರುವ, ವ್ಯಕ್ತಿತ್ವ ಇರುವ ಜೀವಗಳಾಗಿ ಪಕ್ಷಿಗಳನ್ನು ಕಂಡವರು. ಮಕ್ಕಳು ಈ ಕೃತಿಯನ್ನು ಓದುವಂತಾದರೆ ಹಕ್ಕಿಗಳ ಬಗ್ಗೆ ಮಕ್ಕಳಿಗೆ ಬೆರಗು ಮೂಡುತ್ತದೆ. ಪೋಷಕರು ಇಂತಹ ಕೃತಿಗಳನ್ನು ಮಕ್ಕಳಿಗೆ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು