11:14 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

28/12/2021, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು ಕೃತಿಯ ಬಗ್ಗೆ ಮಾತನಾಡಿದರು.

ತೇಜಸ್ವಿ ಅವರು ಪ್ರತಿಯೊಂದು ಪಕ್ಷಿಯ ಬಗ್ಗೆ ವೈಜ್ಞಾನಿಕ ವಿವರಗಳನ್ನು ಕೊಡುವುದರ ಜೊತೆಗೆ ಕಥೆಗಳ ಮೂಲಕ ಪಕ್ಷಿ ಜಗತ್ತಿನ ಕುರಿತು ಕುತೂಹಲವನ್ನು ಈ ಕೃತಿಯಲ್ಲಿ ಮೂಡಿಸಿದ್ದಾರೆ. ಇದು ಈ ಕೃತಿಯ ವಿಶೇಷತೆ. ಪಕ್ಷಿಗಳ ಬಗ್ಗೆ ಆರಂಭಿಕ ಹಂತದಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳಲು ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ ಎಂದರು.

ಪಕ್ಷಿಗಳು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಿದವರು ತೇಜಸ್ವಿ. ತೇಜಸ್ವಿ ಅವರು, ಆತ್ಮಗಳಿರುವ, ವ್ಯಕ್ತಿತ್ವ ಇರುವ ಜೀವಗಳಾಗಿ ಪಕ್ಷಿಗಳನ್ನು ಕಂಡವರು. ಮಕ್ಕಳು ಈ ಕೃತಿಯನ್ನು ಓದುವಂತಾದರೆ ಹಕ್ಕಿಗಳ ಬಗ್ಗೆ ಮಕ್ಕಳಿಗೆ ಬೆರಗು ಮೂಡುತ್ತದೆ. ಪೋಷಕರು ಇಂತಹ ಕೃತಿಗಳನ್ನು ಮಕ್ಕಳಿಗೆ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು