2:17 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

28/12/2021, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು ಕೃತಿಯ ಬಗ್ಗೆ ಮಾತನಾಡಿದರು.

ತೇಜಸ್ವಿ ಅವರು ಪ್ರತಿಯೊಂದು ಪಕ್ಷಿಯ ಬಗ್ಗೆ ವೈಜ್ಞಾನಿಕ ವಿವರಗಳನ್ನು ಕೊಡುವುದರ ಜೊತೆಗೆ ಕಥೆಗಳ ಮೂಲಕ ಪಕ್ಷಿ ಜಗತ್ತಿನ ಕುರಿತು ಕುತೂಹಲವನ್ನು ಈ ಕೃತಿಯಲ್ಲಿ ಮೂಡಿಸಿದ್ದಾರೆ. ಇದು ಈ ಕೃತಿಯ ವಿಶೇಷತೆ. ಪಕ್ಷಿಗಳ ಬಗ್ಗೆ ಆರಂಭಿಕ ಹಂತದಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳಲು ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ ಎಂದರು.

ಪಕ್ಷಿಗಳು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಿದವರು ತೇಜಸ್ವಿ. ತೇಜಸ್ವಿ ಅವರು, ಆತ್ಮಗಳಿರುವ, ವ್ಯಕ್ತಿತ್ವ ಇರುವ ಜೀವಗಳಾಗಿ ಪಕ್ಷಿಗಳನ್ನು ಕಂಡವರು. ಮಕ್ಕಳು ಈ ಕೃತಿಯನ್ನು ಓದುವಂತಾದರೆ ಹಕ್ಕಿಗಳ ಬಗ್ಗೆ ಮಕ್ಕಳಿಗೆ ಬೆರಗು ಮೂಡುತ್ತದೆ. ಪೋಷಕರು ಇಂತಹ ಕೃತಿಗಳನ್ನು ಮಕ್ಕಳಿಗೆ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು