2:52 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ

28/12/2021, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು ಸಾಮಾಜಿಕ ಜಾಲತಾಣಗಳ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು ಕೃತಿಯ ಬಗ್ಗೆ ಮಾತನಾಡಿದರು.

ತೇಜಸ್ವಿ ಅವರು ಪ್ರತಿಯೊಂದು ಪಕ್ಷಿಯ ಬಗ್ಗೆ ವೈಜ್ಞಾನಿಕ ವಿವರಗಳನ್ನು ಕೊಡುವುದರ ಜೊತೆಗೆ ಕಥೆಗಳ ಮೂಲಕ ಪಕ್ಷಿ ಜಗತ್ತಿನ ಕುರಿತು ಕುತೂಹಲವನ್ನು ಈ ಕೃತಿಯಲ್ಲಿ ಮೂಡಿಸಿದ್ದಾರೆ. ಇದು ಈ ಕೃತಿಯ ವಿಶೇಷತೆ. ಪಕ್ಷಿಗಳ ಬಗ್ಗೆ ಆರಂಭಿಕ ಹಂತದಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳಲು ಈ ಕೃತಿ ಅತ್ಯುತ್ತಮ ಆಯ್ಕೆಯಾಗಿದೆ ಎಂದರು.

ಪಕ್ಷಿಗಳು ಸಾಮಾಜಿಕ ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಿದವರು ತೇಜಸ್ವಿ. ತೇಜಸ್ವಿ ಅವರು, ಆತ್ಮಗಳಿರುವ, ವ್ಯಕ್ತಿತ್ವ ಇರುವ ಜೀವಗಳಾಗಿ ಪಕ್ಷಿಗಳನ್ನು ಕಂಡವರು. ಮಕ್ಕಳು ಈ ಕೃತಿಯನ್ನು ಓದುವಂತಾದರೆ ಹಕ್ಕಿಗಳ ಬಗ್ಗೆ ಮಕ್ಕಳಿಗೆ ಬೆರಗು ಮೂಡುತ್ತದೆ. ಪೋಷಕರು ಇಂತಹ ಕೃತಿಗಳನ್ನು ಮಕ್ಕಳಿಗೆ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್ ಹ್ಯಾರಿಸ್, ಪ್ರತಿಷ್ಠಾನದ ಸಿಬ್ಬಂದಿ ಸತೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು