2:01 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ

03/06/2021, 06:42

ಡಿ .ಆರ್. ಜಗದೀಶ್ ನಾಗಮಂಗಲ

info.reporterkarnataka@gmail.com

ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ  ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.

ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ  ಶಾಲೆಯಲ್ಲಿರುವ ಕೋವಿಡ್ ಸೆಂಟರ್ ನ ಕೇಂದ್ರದಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗ ಹಾಗೂ ಜನಪದ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೋಂಕಿತರಲ್ಲಿ ಭಯ, ಆತಂಕ ದೂರ ಮಾಡಲು ಯೋಗ ಹಾಗೂ ಸಂಗೀತ ಇವೆರಡನ್ನು ಆಸ್ವಾದಿಸಬೇಕು. ಆರೋಗ್ಯಕರ ವಾತಾವರಣದಿಂದ ಕೊರೊನಾ ಮುಕ್ತರಾಗಿ ಆರೋಗ್ಯವಾಗಿರಿ ಎಂದು ತಿಳಿಸಿದರು.

ಸೋಂಕಿತರು ಭಯಪಡದೆ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಚಿಕಿತ್ಸೆಯನ್ನು ಪಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಸೋಂಕನ್ನು ಗುಣ ಪಡಿಸಿಕೊಂಡು ನಗುನಗುತ ಮನೆಗೆ ತೆರಳಿ. ಸಂತೋಷದಿಂದ ಜೀವನ ನಡೆಸಿ ಎಂದು  ತಹಶೀಲ್ದಾರ್ ಕುಂಞಿ ಅಹಮದ್ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.  ರಮೇಶ. ಪೊಲೀಸ್ ಇಲಾಖೆಯವರು ಹಾಜರಿದ್ದರು.

ಮಂಜೇಶ್ ನೇತೃತ್ವದ ಗಾಯಕರು ಜನಪದ ಸಂಜೆ ಕಾರ್ಯಕ್ರಮ ನಡೆಸಿ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು