1:19 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ

03/06/2021, 06:42

ಡಿ .ಆರ್. ಜಗದೀಶ್ ನಾಗಮಂಗಲ

info.reporterkarnataka@gmail.com

ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ  ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.

ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ  ಶಾಲೆಯಲ್ಲಿರುವ ಕೋವಿಡ್ ಸೆಂಟರ್ ನ ಕೇಂದ್ರದಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗ ಹಾಗೂ ಜನಪದ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೋಂಕಿತರಲ್ಲಿ ಭಯ, ಆತಂಕ ದೂರ ಮಾಡಲು ಯೋಗ ಹಾಗೂ ಸಂಗೀತ ಇವೆರಡನ್ನು ಆಸ್ವಾದಿಸಬೇಕು. ಆರೋಗ್ಯಕರ ವಾತಾವರಣದಿಂದ ಕೊರೊನಾ ಮುಕ್ತರಾಗಿ ಆರೋಗ್ಯವಾಗಿರಿ ಎಂದು ತಿಳಿಸಿದರು.

ಸೋಂಕಿತರು ಭಯಪಡದೆ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಚಿಕಿತ್ಸೆಯನ್ನು ಪಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಸೋಂಕನ್ನು ಗುಣ ಪಡಿಸಿಕೊಂಡು ನಗುನಗುತ ಮನೆಗೆ ತೆರಳಿ. ಸಂತೋಷದಿಂದ ಜೀವನ ನಡೆಸಿ ಎಂದು  ತಹಶೀಲ್ದಾರ್ ಕುಂಞಿ ಅಹಮದ್ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.  ರಮೇಶ. ಪೊಲೀಸ್ ಇಲಾಖೆಯವರು ಹಾಜರಿದ್ದರು.

ಮಂಜೇಶ್ ನೇತೃತ್ವದ ಗಾಯಕರು ಜನಪದ ಸಂಜೆ ಕಾರ್ಯಕ್ರಮ ನಡೆಸಿ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು