8:10 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ

03/06/2021, 06:42

ಡಿ .ಆರ್. ಜಗದೀಶ್ ನಾಗಮಂಗಲ

info.reporterkarnataka@gmail.com

ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ  ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.

ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ  ಶಾಲೆಯಲ್ಲಿರುವ ಕೋವಿಡ್ ಸೆಂಟರ್ ನ ಕೇಂದ್ರದಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗ ಹಾಗೂ ಜನಪದ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೋಂಕಿತರಲ್ಲಿ ಭಯ, ಆತಂಕ ದೂರ ಮಾಡಲು ಯೋಗ ಹಾಗೂ ಸಂಗೀತ ಇವೆರಡನ್ನು ಆಸ್ವಾದಿಸಬೇಕು. ಆರೋಗ್ಯಕರ ವಾತಾವರಣದಿಂದ ಕೊರೊನಾ ಮುಕ್ತರಾಗಿ ಆರೋಗ್ಯವಾಗಿರಿ ಎಂದು ತಿಳಿಸಿದರು.

ಸೋಂಕಿತರು ಭಯಪಡದೆ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಚಿಕಿತ್ಸೆಯನ್ನು ಪಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಸೋಂಕನ್ನು ಗುಣ ಪಡಿಸಿಕೊಂಡು ನಗುನಗುತ ಮನೆಗೆ ತೆರಳಿ. ಸಂತೋಷದಿಂದ ಜೀವನ ನಡೆಸಿ ಎಂದು  ತಹಶೀಲ್ದಾರ್ ಕುಂಞಿ ಅಹಮದ್ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.  ರಮೇಶ. ಪೊಲೀಸ್ ಇಲಾಖೆಯವರು ಹಾಜರಿದ್ದರು.

ಮಂಜೇಶ್ ನೇತೃತ್ವದ ಗಾಯಕರು ಜನಪದ ಸಂಜೆ ಕಾರ್ಯಕ್ರಮ ನಡೆಸಿ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು