1:53 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕೋಟ: ಕೊರಗ ಸಮುದಾಯದ ಮೆಹಂದಿ ಪಾರ್ಟಿಯಲ್ಲಿ ಪೊಲೀಸ್ ದೌರ್ಜನ್ಯ; ಮದು ಮಗ ಸೇರಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ಆರೋಪ

28/12/2021, 18:15

ಕೋಟ(reporterkarnataka.com): ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದು ಮಗ, ಹೆಣ್ಣು ಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. 

ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಹಲ್ಲೆ ನಡೆಸಿರುವ ಘಟನೆಗೆ ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಲು ಯಾವುದೇ ಕಾರಣವೂ ಇರಲಿಲ್ಲ ಎಂದು ದೂರಿದ್ದಾರೆ.

ಪೊಲೀಸರ ದಾಳಿಗೆ ಕಾರಣವೇನು.?

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ಕೋಟತಟ್ಟು ಗ್ರಾಮದ ಬಾರಿಕೆರೆ ನಿವಾಸಿ ರಾಜೇಶ್ ಅವರ ಮದುವೆ ಕಾರ್ಯಕ್ರಮವು ಡಿ. 29 ರಂದು ಕುಮಟಾದಲ್ಲಿ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ. 27 ರಂದು ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 9.40 ರ ಸುಮಾರಿಗೆ ಹೆದ್ದಾರಿ ಗಸ್ತು ಪೊಲೀಸರು ಮನೆಗೆ ಬಂದಿದ್ದು, ಡಿಜೆ ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಈ ವೇಳೆ ನೈಟ್ ಕರ್ಫ್ಯೂ ನಾಳೆ ರಾತ್ರಿಯಿಂದ ಜಾರಿ ಆಗುತ್ತದೆ. ನಮ್ಮ ಡಿಜೆಯಿಂದ ಯಾರಿಗೂ ತೊಂದರೆ ಆಗುತ್ತಿಲ್ಲ. ಮನೆಯವರೇ ಹೆಚ್ಚಿನ ಮಂದಿ ಇದ್ದು, ಸ್ವಲ್ಪ ಹೊತ್ತು ಕುಣಿದು ಆ ಬಳಿಕ ಬಂದ್ ಮಾಡುವುದಾಗಿ ತಿಳಿಸಿದ್ದರು. ಆ ಬಳಿಕ ಪೊಲೀಸರು ಅಲ್ಲಿಂದ ಹಿಂದೆ ಹೋಗಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಕೋಟ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾವ ಕಾರಣವೂ ಕೇಳದೇ ಡಿಕೆ, ಲೈಟ್ ಆಫ್‌ ಮಾಡಿ ಮೆಹಂದಿ ಮನೆಯಲ್ಲಿದ್ದ ಹೆಣ್ಣು ಮಕ್ಕಳು, ಮಹಿಳೆಯರು, ಮಧುಮಗನಿಗೆ, ಹಿರಿಯರು ಯಾರನ್ನು ನೋಡದೇ ಏಕಾಏಕಿಯಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು