1:11 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೋಟ: ಕೊರಗ ಸಮುದಾಯದ ಮೆಹಂದಿ ಪಾರ್ಟಿಯಲ್ಲಿ ಪೊಲೀಸ್ ದೌರ್ಜನ್ಯ; ಮದು ಮಗ ಸೇರಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ಆರೋಪ

28/12/2021, 18:15

ಕೋಟ(reporterkarnataka.com): ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದು ಮಗ, ಹೆಣ್ಣು ಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. 

ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಹಲ್ಲೆ ನಡೆಸಿರುವ ಘಟನೆಗೆ ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಲು ಯಾವುದೇ ಕಾರಣವೂ ಇರಲಿಲ್ಲ ಎಂದು ದೂರಿದ್ದಾರೆ.

ಪೊಲೀಸರ ದಾಳಿಗೆ ಕಾರಣವೇನು.?

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ಕೋಟತಟ್ಟು ಗ್ರಾಮದ ಬಾರಿಕೆರೆ ನಿವಾಸಿ ರಾಜೇಶ್ ಅವರ ಮದುವೆ ಕಾರ್ಯಕ್ರಮವು ಡಿ. 29 ರಂದು ಕುಮಟಾದಲ್ಲಿ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ. 27 ರಂದು ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 9.40 ರ ಸುಮಾರಿಗೆ ಹೆದ್ದಾರಿ ಗಸ್ತು ಪೊಲೀಸರು ಮನೆಗೆ ಬಂದಿದ್ದು, ಡಿಜೆ ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಈ ವೇಳೆ ನೈಟ್ ಕರ್ಫ್ಯೂ ನಾಳೆ ರಾತ್ರಿಯಿಂದ ಜಾರಿ ಆಗುತ್ತದೆ. ನಮ್ಮ ಡಿಜೆಯಿಂದ ಯಾರಿಗೂ ತೊಂದರೆ ಆಗುತ್ತಿಲ್ಲ. ಮನೆಯವರೇ ಹೆಚ್ಚಿನ ಮಂದಿ ಇದ್ದು, ಸ್ವಲ್ಪ ಹೊತ್ತು ಕುಣಿದು ಆ ಬಳಿಕ ಬಂದ್ ಮಾಡುವುದಾಗಿ ತಿಳಿಸಿದ್ದರು. ಆ ಬಳಿಕ ಪೊಲೀಸರು ಅಲ್ಲಿಂದ ಹಿಂದೆ ಹೋಗಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಕೋಟ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾವ ಕಾರಣವೂ ಕೇಳದೇ ಡಿಕೆ, ಲೈಟ್ ಆಫ್‌ ಮಾಡಿ ಮೆಹಂದಿ ಮನೆಯಲ್ಲಿದ್ದ ಹೆಣ್ಣು ಮಕ್ಕಳು, ಮಹಿಳೆಯರು, ಮಧುಮಗನಿಗೆ, ಹಿರಿಯರು ಯಾರನ್ನು ನೋಡದೇ ಏಕಾಏಕಿಯಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು