10:49 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕೋಟ: ಕೊರಗ ಸಮುದಾಯದ ಮೆಹಂದಿ ಪಾರ್ಟಿಯಲ್ಲಿ ಪೊಲೀಸ್ ದೌರ್ಜನ್ಯ; ಮದು ಮಗ ಸೇರಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ಆರೋಪ

28/12/2021, 18:15

ಕೋಟ(reporterkarnataka.com): ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದು ಮಗ, ಹೆಣ್ಣು ಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. 

ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಹಲ್ಲೆ ನಡೆಸಿರುವ ಘಟನೆಗೆ ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಲು ಯಾವುದೇ ಕಾರಣವೂ ಇರಲಿಲ್ಲ ಎಂದು ದೂರಿದ್ದಾರೆ.

ಪೊಲೀಸರ ದಾಳಿಗೆ ಕಾರಣವೇನು.?

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ಕೋಟತಟ್ಟು ಗ್ರಾಮದ ಬಾರಿಕೆರೆ ನಿವಾಸಿ ರಾಜೇಶ್ ಅವರ ಮದುವೆ ಕಾರ್ಯಕ್ರಮವು ಡಿ. 29 ರಂದು ಕುಮಟಾದಲ್ಲಿ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ. 27 ರಂದು ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 9.40 ರ ಸುಮಾರಿಗೆ ಹೆದ್ದಾರಿ ಗಸ್ತು ಪೊಲೀಸರು ಮನೆಗೆ ಬಂದಿದ್ದು, ಡಿಜೆ ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಈ ವೇಳೆ ನೈಟ್ ಕರ್ಫ್ಯೂ ನಾಳೆ ರಾತ್ರಿಯಿಂದ ಜಾರಿ ಆಗುತ್ತದೆ. ನಮ್ಮ ಡಿಜೆಯಿಂದ ಯಾರಿಗೂ ತೊಂದರೆ ಆಗುತ್ತಿಲ್ಲ. ಮನೆಯವರೇ ಹೆಚ್ಚಿನ ಮಂದಿ ಇದ್ದು, ಸ್ವಲ್ಪ ಹೊತ್ತು ಕುಣಿದು ಆ ಬಳಿಕ ಬಂದ್ ಮಾಡುವುದಾಗಿ ತಿಳಿಸಿದ್ದರು. ಆ ಬಳಿಕ ಪೊಲೀಸರು ಅಲ್ಲಿಂದ ಹಿಂದೆ ಹೋಗಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಕೋಟ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾವ ಕಾರಣವೂ ಕೇಳದೇ ಡಿಕೆ, ಲೈಟ್ ಆಫ್‌ ಮಾಡಿ ಮೆಹಂದಿ ಮನೆಯಲ್ಲಿದ್ದ ಹೆಣ್ಣು ಮಕ್ಕಳು, ಮಹಿಳೆಯರು, ಮಧುಮಗನಿಗೆ, ಹಿರಿಯರು ಯಾರನ್ನು ನೋಡದೇ ಏಕಾಏಕಿಯಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು