5:11 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಬಿಜೆಪಿ ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿದೆ, ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ: ಬೊಮ್ಮಾಯಿ

29/12/2021, 15:49

ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುವುದು ಮೊದಲಿನಿಂದಲೂ ಕೇಂದ್ರದ ವರಿಷ್ಠರ ಇಚ್ಛೆಯಾಗಿತ್ತು. ಈಗ ಕಾರ್ಯಕಾರಿಣಿಯಲ್ಲಿ ರಾಜ್ಯ ಉಸ್ತುವಾರಿ ಅರಣ್ ಸಿಂಗ್ ಅವರು ಪುನರ್ ಉಚ್ಛರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿದ್ದ ಕಾರಣ ಮುಂದುವರಿಯಲು ತಿಳಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಪಕ್ಷ ಬಲಿಷ್ಠವಾಗಬೇಕು ಪಕ್ಷ ಮತ್ತು ಸರ್ಕಾರದ ನಡುವೆ ಸಂಯೋಜನೆಯಾಗಬೇಕು. ಒಗ್ಗಟ್ಟಿನಿಂದ ಎಲ್ಲರೂ ಪಕ್ಷ ಸಂಘಟನೆ, ಬೆಳವಣಿಗೆ ಮತ್ತು ಬರುವಂತಹ ಚುನಾವಣೆ ಪರಿಶ್ರಮದಿಂದ ಎದುರಿಸುತ್ತೇವೆ ಎಂದರು.

ಸದ್ಯದಲ್ಲಿ ಯಾವುದೇ ದೆಹಲಿ ಪ್ರವಾಸವಿಲ್ಲ. ಹಲವಾರು ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಡೆಸುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು