10:30 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ

29/12/2021, 16:57

ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. 

ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.

10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು