11:04 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ

29/12/2021, 16:57

ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. 

ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.

10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು