3:59 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಬೀದಿ ವ್ಯಾಪಾರಿಗಳಿಂದ ಪಾಲಿಕೆ ಕಚೇರಿಗೆ ಮುತ್ತಿಗೆ: ನಿಯಮ ಮೀರಿ ಕಾರ್ಯಾಚರಣೆಗೆ ಭಾರಿ ಆಕ್ರೋಶ

29/12/2021, 18:23

ಮಂಗಳೂರು(reporterkarnataka.com) : ನಗರದಲ್ಲಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಅಕ್ರಮ ದಾಳಿ ನಡೆಸಿ ಸೊತ್ತುಗಳನ್ನು ನಾಶಪಡಿಸಿರುವುದನ್ನು ಖಂಡಿಸಿ ಬುಧವಾರ  ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ದಿ ಸಂಘದ ನೇತೃತ್ವದಲ್ಲಿ 
ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆ ಉದ್ಘಾಟಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಕೋವಿಡ್ ನ ಸಂಕಷ್ಟದ ಕಾಲದಲ್ಲಿ  ತತ್ತರಿಸಿ ಹೋಗಿರುವ ಬಡ ಬೀದಿಬದಿ ವ್ಯಾಪಾರಿಗಳ ಮೇಲೆ  ದಾಳಿ ಮಾಡಿರುವುದು ಅಮಾನುಷ ಕೃತ್ಯವಾಗಿದೆ. ಹೃದಯ ಹೀನ ಅಧಿಕಾರಿಗಳು ಬಡಪಾಯಿ ವ್ಯಾಪಾರಿಗಳ ಮೇಲೆ ರಕ್ತ ಬೀಜಾಸುರರಂತೆ ಸೊತ್ತುಗಳನ್ನು ನಾಶ ಮಾಡಿದ್ದಾರೆ.

ಈ ರೀತಿಯ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸಂಘದ ಗೌರವಧ್ಯಕ್ಷ  ಬಿ.ಕೆ.  ಇಮ್ತಿಯಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬೀದಿಬದಿ ವ್ಯಾಪಾರಕ್ಕೆ ಪೂರಕವಾಗಿ 2014ರಲ್ಲಿ ಕೇಂದ್ರ ಸರಕಾರ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ ಜಾರಿಗೆ ತಂದಿದೆ ಮತ್ತು 2019 ರಲ್ಲಿ ಕರ್ನಾಟಕ ಸರಕಾರ ಅಧಿನಿಯಮಗಳನ್ನು ಜಾರಿಗೆ ತಂದಿದೆ. ಅದರಂತೆ ಮಂಗಳೂರಿನಲ್ಲಿ ಪೂರ್ಣ ಪ್ರಮಾಣದ ಪಟ್ಟಣ ವ್ಯಾಪಾರ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಕಾಯಿದೆಯ ಪ್ರಕಾರ ಕಾರ್ಯಾಚರಣೆ ನಡೆಸಬೇಕಿದ್ದರೆ  ಪಟ್ಟಣ ವ್ಯಾಪಾರ ಸಮಿತಿಯಲ್ಲಿ  ಚರ್ಚಿಸಿ ನಿರ್ಣಯ ಮಾಡಬೇಕಾಗುತ್ತದೆ. ಆದರೆ ಇಲ್ಲಿ ನಿಯಮಗಳನ್ನು ಗಾಳಿಗೆ ತೂರಿ ದಾಳಿ ನಡೆದಿದೆ. ಸರಕಾರದ ಗುರುತಿನ ಚೀಟಿ ಹೊಂದಿರುವವರ  ಸೊತ್ತುಗಳನ್ನು ನಾಶ ಮಾಡಿ ದರ್ಪ ತೋರಿದ್ದಾರೆ.

ಕಾನೂನು ಮೀರಿ ದಾಳಿ ಮಾಡಿದವರ ಮೇಲೆ ಕ್ರಿಮಿನಲ್ ಕೇಸುಗಳನ್ನು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ, ಡಿವೈಎಫ್ಐ  ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಕೋಶಾಧಿಕಾರಿ ಆಸೀಫ್ ಮಂಜನಾಡಿ, ಮಾಜಿ ಕಾರ್ಯದರ್ಶಿ ಸಂತೋಷ್ ಆರ್. ಎಸ್ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ ಅವರು ಹೋರಾಟ ಬೆಂಬಲಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಚೆರಿಯೋನು ಸುರತ್ಕಲ್, ಖಾಜಾ ಮೊಯಿನುದ್ದಿನ್, ಶ್ರೀಧರ, ಆನಂದ, ಬೇಬಿ,  ನಜೀರ್, ನೌಶಾದ್, ನಿತಿನ್ ಬಂಗೇರ ಉಪಸ್ಥಿತರಿದ್ದರು 

ಪ್ರತಿಭಟನೆಗೆ ಮಣಿದ ನಗರ ಪಾಲಿಕೆ ಅಧಿಕಾರಿಗಳು: ಅನಿರ್ಧಿಷ್ಟಾವಧಿ ಹೋರಾಟಕ್ಕೆ ತಯಾರಿ ನಡೆಸಿಕೊಂಡು ಹೋರಾಟಕ್ಕೆ ಇಳಿದಿದ್ದ ಬೀದಿಬದಿ ವ್ಯಾಪಾರಿಗಳ  ಒತ್ತಾಯಕ್ಕೆ ಮಣಿದ ನಗರಪಾಲಿಕೆ ಪಾಲಿಕೆಯ ಪ್ರಭಾರ ಆಯುಕ್ತರು ಆಗಿರುವ ಮೂಡಾ ಆಯುಕ್ತರನ್ನು  ಪ್ರತಿಭಟನಾ ಸ್ಥಳಕ್ಕೆ ಕಳುಹಿಸಿ ಕಾರ್ಯಾಚರಣೆಯನ್ನು ಹಿಂಪಡೆಯುವ ತೀರ್ಮಾನವನ್ನು ಪ್ರಕಟಿಸಿದರು. ವಶಪಡಿಸಲಾದ ಸರಕುಗಳನ್ನು ವಾಪಸ್ ನೀಡುವುದು ಮತ್ತು ಹಾನಿ ಮಾಡಲಾದ ವಸ್ತುಗಳಿಗೆ ಪರಿಹಾರ ನೀಡುವ ಬಗ್ಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು