2:04 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಪೂವಮ್ಮಗೆ ಕಂಕಣ ಭಾಗ್ಯ: ಕೇರಳದ ಅಥ್ಲೀಟ್ ಜಿತಿನ್ ಜತೆ ಸಪ್ತಪದಿ

29/12/2021, 19:53

ಮಂಗಳೂರು(reporterkarnataka.com): ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆ ಬುಧವಾರ ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್‌ನ ವಿ. ಕೆ. ಶೆಟ್ಟಿ ಸಭಾಂಗಣದಲ್ಲಿ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ವಿವಾಹ ನೆರವೇರಿತು. ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ.ತಮ್ಮಯ್ಯ(ರಾಜು), ತಾಯಿ ಜಾನಕಿ (ಜಾಜಿ), ಜಿತಿನ್ ಅವರ ತಾಯಿ ಜಾನ್ಸಿ ಸೇರಿದಂತೆ ಕುಟುಂಬಸ್ಥರು, ಬಂಧುಮಿತ್ರರು, ಕ್ರೀಡಾಪಟುಗಳು ಹಾಗೂ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ. 

ಕೊಡಗು ಮೂಲದ ೩೧ ವರ್ಷದ ಪೂವಮ್ಮ ಅವರು ೨೦೧೪ರಲ್ಲಿ ಇಂಚೋನ್ ಏಷ್ಯಾಡ್‌ನಲ್ಲಿ ೧ ಚಿನ್ನ, ೧ ಕಂಚು ಮತ್ತು ೨೦೧೮ರ ಜಕಾರ್ತ ಏಷ್ಯಾಡ್‌ನಲ್ಲಿ ೨ ಚಿನ್ನ ಪದಕ ಗೆದ್ದಿದ್ದರು.  ಜ.೧ರಂದು ಪೂವಮ್ಮರ ಪತಿ ಜಿತಿನ್ ಅವರ ಊರು ಕೇರಳದ ತ್ರಿಶೂರಿನಲ್ಲಿ ಮತ್ತೊಂದು ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು