1:54 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಮಂಗಳೂರು: ಕೊರಗಜ್ಜ ಕಟ್ಟೆಯಲ್ಲಿ ಕಾಂಡೋಮ್ ಇರಿಸಿದ ಆರೋಪಿ ಬಂಧನ; ಊಹಾಪೋಹಗಳಿಗೆ ತೆರೆ

30/12/2021, 09:55

ಮಂಗಳೂರು(reporterkarnataka.com): ನಗರದ ಅತ್ತಾವರ ಬಳಿಯ ಕೊರಗಜ್ಜ ಕಟ್ಟೆಯಲ್ಲಿ ಉಪಯೋಗಿಸಿದ ಕಾಂಡೋಮ್ ಇರಿಸಿ ಅಪವಿತ್ರಗೊಳಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಹುಬ್ಬಳ್ಳಿ ಯವನಾದ ಪ್ರಸ್ತುತ ಕೋಟೆಕಾರು ಮುಂಡಾಣ ಎಂಬಲ್ಲಿ ವಾಸವಾಗಿರುವ ದೇವದಾಸ್ ದೇಸಾಯಿ (62) ಬಂಧಿತ ಆರೋಪಿ. ಈತನ ತಂದೆ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದು, ವಿವಿಧ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಗುರುದ್ವಾರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತಾದ ಲೇಖನ ಹಾಕಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ,ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ, ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಫು ನಾಗನ ಕಟ್ಟೆ , ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ , ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ, ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು, ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್, ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು ಮುಂತಾದ ಕಡೆ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು